ಎಸ್ ಜೈಶಂಕರ್ online desk
ದೇಶ

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ: ಜೈಶಂಕರ್

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಬೆಂಗಳೂರು: ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆ ಪ್ರಕರಣಗಳಿಗೆ ಸಂಬಂಧವಿಲ್ಲದೇ ಇದ್ದರೂ ಸಹ ಘಟನೆಗಳು ಸರ್ಕಾರಕ್ಕೆ ಖಂಡಿತವಾಗಿಯೂ ದೊಡ್ಡ ಆತಂಕವಾಗಿ ಮಾರ್ಪಟ್ಟಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ವಿದ್ಯಾರ್ಥಿಗಳ ಹತ್ಯೆಗಳು ವೈಯಕ್ತಿಕ ವಿಷಯಗಳಿಗಾಗಿ ನಡೆಯುತ್ತಿದೆ. ಇನ್ನು ಕೆಲವರು ಆಕಸ್ಮಿಕ ಘಟನೆಗಳ ಬಲಿಪಶುಗಳಾಗಿರಬಹುದು ಎಂದು ಜೈಶಂಕರ್ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿರುವ ವಿದೇಶಾಂಗ ಸಚಿವರು, ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದು, ಪ್ರತಿ ಪ್ರಕರಣವೂ ದುರದೃಷ್ಟಕರ, ಕುಟುಂಬಸ್ಥರಿಗೆ ಅತ್ಯಂತ ನೋವಿನ ಸಂಗತಿಯಾಗಿದ್ದು, ನಮಗೂ ಆತಂಕಕಾರಿ ಎಂದು ಹೇಳಿದ್ದಾರೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ನಮ್ಮ ರಾಯಭಾರ ಕಚೇರಿ ಅಥವಾ ದೂತವಾಸ ಕಚೇರಿ ಪರಿಶೀಲನೆ ನಡೆಸಿದೆ. ಆದರೆ ಅದಕ್ಕೆ ಯಾವುದಕ್ಕೂ ವಾಸ್ತವದಲ್ಲಿ ಕಾನೂನು ರೀತಿಯಲ್ಲಿ ಭಾರತಕ್ಕೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಅವರೊಂದಿಗೆ ಚಾಟ್ ಮಾಡಲು ರಾಯಭಾರ ಕಚೇರಿಗಳಿಗೆ ಸೂಚನೆ ನೀಡಲಾಗಿದೆ, ವಿಶೇಷವಾಗಿ ನಗರಗಳ ಅಪಾಯಕಾರಿ ಪ್ರದೇಶಗಳ ಬಗ್ಗೆ ಎಚ್ಚರಿಸಲು, ವಿವಿಧ ದೇಶಗಳಲ್ಲಿ 11 ಲಕ್ಷದಿಂದ 12 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ. ವಿದ್ಯಾರ್ಥಿ ಕಲ್ಯಾಣ ಬಹಳ ಮುಖ್ಯ. ನಾನು ಹೇಳಿದಂತೆ ಪ್ರತಿಯೊಬ್ಬ ಭಾರತೀಯನೂ ಹೊರಗೆ ಹೋಗುವಾಗ ಮೋದಿಯವರ ಗ್ಯಾರಂಟಿ ಇದೆ. ವಿದ್ಯಾರ್ಥಿ ಕ್ಷೇಮ ನಮಗೆ ಮುಖ್ಯವಾಗಿದೆ ಎಂದು ಜೈಶಂಕರ್ ಹೇಳಿದರು.

ವಶಕ್ಕೆ ಪಡೆದಿರುವ ಹಡಗಿನಲ್ಲಿ 17 ಭಾರತೀಯರ ಬಿಡುಗಡೆಗೆ ಇರಾನ್ ನಿಂದ ಸಕಾರಾತ್ಮಕ ಪ್ರತಿಕ್ರಿಯೆ

ಇರಾನ್ ಸೇನೆ ವಶಕ್ಕೆ ಪಡೆದಿರುವ ಪೋರ್ಚುಗೀಸ್ ಸರಕು ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು, ಅವರ ಬಿಡುಗಡೆಗೆ ಭಾರತ ಇರಾನ್ ಗೆ ಮನವಿ ಮಾಡಿದೆ ಎಂದು ಇದೇ ವೇಳೆ ಜೈಶಂಕರ್ ತಿಳಿಸಿದ್ದಾರೆ.

ಭಾರತದ ಮನವಿಗೆ ಇರಾನ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧದ ಬೆಳವಣಿಗೆಗಳ ಸಂವಹನಗಳು ಭಾರತ- ಇರಾನ್ ನಡುವೆ ನಡೆಯಲಿದೆ ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT