ಎಸ್ ಜೈಶಂಕರ್ online desk
ದೇಶ

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ: ಜೈಶಂಕರ್

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಬೆಂಗಳೂರು: ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆ ಪ್ರಕರಣಗಳಿಗೆ ಸಂಬಂಧವಿಲ್ಲದೇ ಇದ್ದರೂ ಸಹ ಘಟನೆಗಳು ಸರ್ಕಾರಕ್ಕೆ ಖಂಡಿತವಾಗಿಯೂ ದೊಡ್ಡ ಆತಂಕವಾಗಿ ಮಾರ್ಪಟ್ಟಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ವಿದ್ಯಾರ್ಥಿಗಳ ಹತ್ಯೆಗಳು ವೈಯಕ್ತಿಕ ವಿಷಯಗಳಿಗಾಗಿ ನಡೆಯುತ್ತಿದೆ. ಇನ್ನು ಕೆಲವರು ಆಕಸ್ಮಿಕ ಘಟನೆಗಳ ಬಲಿಪಶುಗಳಾಗಿರಬಹುದು ಎಂದು ಜೈಶಂಕರ್ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿರುವ ವಿದೇಶಾಂಗ ಸಚಿವರು, ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದು, ಪ್ರತಿ ಪ್ರಕರಣವೂ ದುರದೃಷ್ಟಕರ, ಕುಟುಂಬಸ್ಥರಿಗೆ ಅತ್ಯಂತ ನೋವಿನ ಸಂಗತಿಯಾಗಿದ್ದು, ನಮಗೂ ಆತಂಕಕಾರಿ ಎಂದು ಹೇಳಿದ್ದಾರೆ. ಪ್ರತಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ನಮ್ಮ ರಾಯಭಾರ ಕಚೇರಿ ಅಥವಾ ದೂತವಾಸ ಕಚೇರಿ ಪರಿಶೀಲನೆ ನಡೆಸಿದೆ. ಆದರೆ ಅದಕ್ಕೆ ಯಾವುದಕ್ಕೂ ವಾಸ್ತವದಲ್ಲಿ ಕಾನೂನು ರೀತಿಯಲ್ಲಿ ಭಾರತಕ್ಕೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಅವರೊಂದಿಗೆ ಚಾಟ್ ಮಾಡಲು ರಾಯಭಾರ ಕಚೇರಿಗಳಿಗೆ ಸೂಚನೆ ನೀಡಲಾಗಿದೆ, ವಿಶೇಷವಾಗಿ ನಗರಗಳ ಅಪಾಯಕಾರಿ ಪ್ರದೇಶಗಳ ಬಗ್ಗೆ ಎಚ್ಚರಿಸಲು, ವಿವಿಧ ದೇಶಗಳಲ್ಲಿ 11 ಲಕ್ಷದಿಂದ 12 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ. ವಿದ್ಯಾರ್ಥಿ ಕಲ್ಯಾಣ ಬಹಳ ಮುಖ್ಯ. ನಾನು ಹೇಳಿದಂತೆ ಪ್ರತಿಯೊಬ್ಬ ಭಾರತೀಯನೂ ಹೊರಗೆ ಹೋಗುವಾಗ ಮೋದಿಯವರ ಗ್ಯಾರಂಟಿ ಇದೆ. ವಿದ್ಯಾರ್ಥಿ ಕ್ಷೇಮ ನಮಗೆ ಮುಖ್ಯವಾಗಿದೆ ಎಂದು ಜೈಶಂಕರ್ ಹೇಳಿದರು.

ವಶಕ್ಕೆ ಪಡೆದಿರುವ ಹಡಗಿನಲ್ಲಿ 17 ಭಾರತೀಯರ ಬಿಡುಗಡೆಗೆ ಇರಾನ್ ನಿಂದ ಸಕಾರಾತ್ಮಕ ಪ್ರತಿಕ್ರಿಯೆ

ಇರಾನ್ ಸೇನೆ ವಶಕ್ಕೆ ಪಡೆದಿರುವ ಪೋರ್ಚುಗೀಸ್ ಸರಕು ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು, ಅವರ ಬಿಡುಗಡೆಗೆ ಭಾರತ ಇರಾನ್ ಗೆ ಮನವಿ ಮಾಡಿದೆ ಎಂದು ಇದೇ ವೇಳೆ ಜೈಶಂಕರ್ ತಿಳಿಸಿದ್ದಾರೆ.

ಭಾರತದ ಮನವಿಗೆ ಇರಾನ್ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧದ ಬೆಳವಣಿಗೆಗಳ ಸಂವಹನಗಳು ಭಾರತ- ಇರಾನ್ ನಡುವೆ ನಡೆಯಲಿದೆ ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT