ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ನೌಕಪಡೆಯಿಂದ ಅರಬ್ಬಿ ಸಮುದ್ರದಲ್ಲಿ 940 ಕೆಜಿ ಡ್ರಗ್ಸ್ ವಶ!

ಭಾರತೀಯ ನೌಕಾಪಡೆಯು ಪಶ್ಚಿಮ ಅರೇಬಿಯನ್ ಸಮುದ್ರದಲ್ಲಿ 940 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನವದೆಹಲಿ: ಭಾರತೀಯ ನೌಕಾಪಡೆಯು ಪಶ್ಚಿಮ ಅರೇಬಿಯನ್ ಸಮುದ್ರದಲ್ಲಿ 940 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂಚೂಣಿ ಹಡಗು ಐಎನ್‌ಎಸ್ ತಲ್ವಾರ್‌ನಲ್ಲಿ ನಿಯೋಜಿತರಾದ ಭಾರತೀಯ ನೌಕಾಪಡೆಯ ಗಣ್ಯ ಮಾರ್ಕೋಸ್ ಕಮಾಂಡೋಗಳು ಏಪ್ರಿಲ್ 13 ರಂದು 'ಕ್ರಿಮ್ಸನ್ ಬರ್ರಾಕುಡಾ' ಹೆಸರಿನ ಕಾರ್ಯಾಚರಣೆಯ ಭಾಗವಾಗಿ ದೋಣಿಯೊಂದರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಭಾರತೀಯ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಕೆನಡಾದ ನೇತೃತ್ವದ ಸಂಯೋಜಿತ ಟಾಸ್ಕ್ ಫೋರ್ಸ್ 150 ಗೆ ಬೆಂಬಲವಾಗಿ ಕಾರ್ಯನಿರ್ವಹಿಸುತ್ತಿರುವ INS ತಲ್ವಾರ್ ಇದೇ ಮೊದಲ ಬಾರಿಗೆ ಮಾದಕ ವಸ್ತು ಸಾಗಣೆ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು,

ಅರಬ್ಬಿ ಸಮುದ್ರದಲ್ಲಿ 940 ಕೆಜಿಯಷ್ಟು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಸಂಯೋಜಿತ ಕಡಲ ಪಡೆ (CMF) ಹೇಳಿದೆ.

CMF 42-ರಾಷ್ಟ್ರಗಳ ನೌಕಾ ಪಾಲುದಾರಿಕೆಯಾಗಿದ್ದು, ವಿಶ್ವದ ಕೆಲವು ಪ್ರಮುಖ ಹಡಗು ಮಾರ್ಗಗಳನ್ನು ಒಳಗೊಂಡಿರುವ 3.2 ಮಿಲಿಯನ್ ಚದರ ಮೈಲುಗಳಷ್ಟು ನೀರಿನಲ್ಲಿ ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಮೂಲಕ ಅಂತರರಾಷ್ಟ್ರೀಯ ನಿಯಮಗಳನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ.

ಕಡಲ ಭದ್ರತಾ ಕಾರ್ಯಾಚರಣೆಗಾಗಿ ಪಶ್ಚಿಮ ಅರೇಬಿಯನ್ ಸಮುದ್ರದಲ್ಲಿ ನಿಯೋಜಿಸಲಾಗಿರುವ ಭಾರತೀಯ ನೌಕಾಪಡೆಯ ಹಡಗು INS ತಲ್ವಾರ್, ಏಪ್ರಿಲ್ 13 ರಂದು ನಿಷೇಧಿತ ಮಾದಕ ವಸ್ತುವನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದೆ" ಎಂದು ಭಾರತೀಯ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT