ಟಿಎಂಸಿ ಪ್ರಣಾಳಿಕೆ ಬಿಡುಗಡೆ 
ದೇಶ

ಲೋಕಸಭೆ ಚುನಾವಣೆಗೆ ಟಿಎಂಸಿ ಪ್ರಣಾಳಿಕೆ ಬಿಡುಗಡೆ: ಸಿಎಎ ರದ್ದು ಸೇರಿ ಹಲವು ಭರವಸೆ

ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬಂದರೆ ಸಿಎಎ ರದ್ದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬಂದರೆ ಸಿಎಎ ರದ್ದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಇಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಟಿಎಂಸಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಜ್ಯಸಭಾ ಸದಸ್ಯ ಡೆರೆಕ್  ಒ'ಬ್ರೇನ್ ಅವರು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಯಂತ್ರಿಸುತ್ತೇವೆ. ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅನ್ನು ರದ್ದುಗೊಳಿಸುತ್ತೇವೆ. ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ)ಯನ್ನು ಸಹ ತಡೆಯುತ್ತೇವೆ ಎಂದು ಟಿಎಂಸಿ ನಾಯಕ ಅಮಿತ್ ಮಿತ್ರಾ ಅವರು ಭರವಸೆ ನೀಡಿದರು.

ರೇಷನ್ ಅನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸುತ್ತೇವೆ ಮತ್ತು ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 10 ಎಲ್ ಪಿಜಿ ಸಿಲಿಂಡರ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಟಿಎಂಸಿ ಭರವಸೆ ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕ ಮಾತುಕತೆ ವಿಫಲವಾದ ನಂತರ ಕಳೆದ ಜನವರಿಯಲ್ಲಿ ಟಿಎಂಸಿ ಇಂಡಿಯಾ ಮೈತ್ರಿಕೂಟದಿಂದ ಹೊರ ಬಂದಿತ್ತು. ಆದಾಗ್ಯೂ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗುವುದಾಗಿ ಟಿಎಂಸಿ ಮುಖ್ಯಸ್ಥ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್