ಹಕ್ಕಿ ಜ್ವರ ಪತ್ತೆ 
ದೇಶ

ಕೇರಳದಲ್ಲಿ ಮಾರಕ ಹಕ್ಕಿ ಜ್ವರ ಪತ್ತೆ; ಬಾತುಕೋಳಿಗಳಲ್ಲಿ Bird flu ಸೋಂಕು, ತೀವ್ರ ಕಟ್ಟೆಚ್ಚರ

ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಪತ್ತೆಯಾದ ಬೆನಲ್ಲೇ ಇದೀಗ ಕೇರಳದಲ್ಲಿ ಮಾರಕ ಹಕ್ಕಿ ಜ್ವರ ಪತ್ತೆಯಾಗಿರುವುದು ವರದಿಯಾಗಿದೆ.

ಅಲಪ್ಪುಳ: ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಪತ್ತೆಯಾದ ಬೆನಲ್ಲೇ ಇದೀಗ ಕೇರಳದಲ್ಲಿ ಮಾರಕ ಹಕ್ಕಿ ಜ್ವರ ಪತ್ತೆಯಾಗಿರುವುದು ವರದಿಯಾಗಿದೆ.

ಕೇರಳದಲ್ಲಿ ಅಲಪ್ಪುಳದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿದ್ದು, ಅಲಪ್ಪುಳ ಜಿಲ್ಲೆಯ ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1ರ ಪ್ರದೇಶದಲ್ಲಿ ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.‌

ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನಲೆ ಮಾದರಿಗಳನ್ನು ಪರೀಕ್ಷೆಗಾಗಿ ಭೋಪಾಲ್‌ನ ಲ್ಯಾಬ್‌ಗೆ ಕಳುಹಿಸಿದಾಗ ಅದರಿಂದ ಬಂದ ವರದಿಯಲ್ಲಿ ಏವಿಯನ್ ಇನ್ಫ್ಲುಯೆನ್ಸ (H5N1) ರೋಗ ಇರುವುದು ದೃಢಪಟ್ಟಿದೆ. ವಿಚಾರ ತಿಳಿದ ಕೂಡಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ರ್‍ಯಾಪಿಡ್‌ ಆಕ್ಷನ್‌ ಫೋರ್ಸ್‌ ತಂಡವನ್ನು ರಚಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಟಿಸಿದೆ.

ಈಗಾಗಲೇ ಈ ತಂಡ ಕಾರ್ಯಾಚರಣೆ ನಡೆಸಿದ್ದು ಸೋಂಕು ಕಂಡುಬಂದ ಪ್ರದೇಶಗಳ ಸುತ್ತ ಕಟ್ಟೆಚ್ಚರ ವಹಿಸಿದೆ. ಸೋಂಕು ಉಲ್ಬಣಿಸದಂತೆ ಸೋಂಕಿತ ಪ್ರದೇಶಗಳ ಸುತ್ತಮುತ್ತಲ ಪ್ರದೇಶವನ್ನು 'ರೋಗಪೀಡಿತ ವಲಯ' ಘೋಷಣೆ ಮಾಡಿ ರಾಸಾಯನಿಕಗಳನ್ನು ಸಿಂಪಡಿಸಿ ಮುನ್ನೆಚ್ಚರಿಕೆ ವಹಿಸಿದೆ.

ಅಲ್ಲದೆ ಈ ಪ್ರದೇಶಗಳಲ್ಲಿರುವ ಕೋಳಿಗಳು ಮತ್ತು ಬಾತುಕೋಳಿ, ಇತರೆ ಪಕ್ಷಿಗಳನ್ನೂ ಕೂಡ ಪರೀಕ್ಷೆಗೊಳಪಡಿಸಲಾಗುತ್ತದೆ. ಆದಷ್ಟು ಬೇಗ ಪಶು ಕಲ್ಯಾಣ ಇಲಾಖೆಯಿಂದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೂಡ ನಡೆದಿದ್ದು, ಸಭೆಯಲ್ಲಿ ಸೋಂಕು ಪತ್ತೆಯಾದ ಕೇಂದ್ರದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ಎಲ್ಲ ದೇಶೀಯ ಪಕ್ಷಿಗಳನ್ನು ಕೊಂದು ನಾಶಪಡಿಸುವ (ಕೊಲ್ಲುವ) ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಅಂದಹಾಗೆ ಈ ಹಕ್ಕಿ ಜ್ವರ ಮನುಷ್ಯರಿಗೆ ರೋಗ ಹರಡುವ ಸಾಧ್ಯತೆ ಕಡಿಮೆ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT