ರಾಜ್ ಕುಂದ್ರಾ ಮತ್ತು ನಟಿ ಶಿಲ್ಪಾ ಶೆಟ್ಟಿ 
ದೇಶ

ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಸೇರಿದ 98 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ ಪುಣೆಯ ಬಂಗಲೆ ಮತ್ತು ಈಕ್ವಿಟಿ ಷೇರುಗಳು ಸೇರಿದಂತೆ 98 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ.

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ ಪುಣೆಯ ಬಂಗಲೆ ಮತ್ತು ಈಕ್ವಿಟಿ ಷೇರುಗಳು ಸೇರಿದಂತೆ 98 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ.

ಬಿಟ್‌ಕಾಯಿನ್‌ಗಳ ಬಳಕೆಯ ಮೂಲಕ ಹೂಡಿಕೆದಾರರಿಗೆ ಹಣವನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಆಸ್ತಿ ಜಪ್ತಿ ಮಾಡಿದೆ.

ಜಾರಿ ನಿರ್ದೇಶನಾಲಯವು ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿರುವ ಜುಹು (ಮುಂಬೈ) ನಲ್ಲಿರುವ ವಸತಿ ಫ್ಲಾಟ್ ಹಾಗೂ ರಾಜ್ ಕುಂದ್ರಾ ಅವರ ಹೆಸರಿನಲ್ಲಿರುವ ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಒಟ್ಟು 97.79 ಕೋಟಿ ರೂ. ಮೌಲ್ಯದ ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶವನ್ನು ಹೊರಡಿಸಲಾಗಿದೆ ಎಂದು ಅದು ಹೇಳಿದೆ.

ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿ, ದಿವಂಗತ ಅಮಿತ್ ಭಾರದ್ವಾಜ್, ಅಜಯ್ ಭಾರದ್ವಾಜ್, ವಿವೇಕ್ ಭಾರದ್ವಾಜ್, ಸಿಂಪಿ ಭಾರದ್ವಾಜ್, ಮಹೇಂದರ್ ಭಾರದ್ವಾಜ್ ಸೇರಿಂದೆತೆ ಹಲವಾರು ಏಜೆಂಟ್‌ಗಳ ವಿರುದ್ಧ ಮಹಾರಾಷ್ಟ್ರ ಮತ್ತು ದೆಹಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳಿಂದ ಈ ಹಣ ಅಕ್ರಮ ವರ್ಗಾವಣೆ ಪ್ರಕರಣವು ಉದ್ಭವಿಸಿದೆ. ಇವರು ಬಿಟ್‌ಕಾಯಿನ್‌ಗಳ ರೂಪದಲ್ಲಿ (2017 ರಲ್ಲಿ 6,600 ಕೋಟಿ ರೂ. ಮೌಲ್ಯದ) ಬೃಹತ್ ಮೊತ್ತದ ಹಣವನ್ನು ತಿಂಗಳಿಗೆ ಶೇ 10 ರಷ್ಟು ಆದಾಯ ನೀಡುವ ಸುಳ್ಳು ಭರವಸೆಗಳೊಂದಿಗೆ ಸಾರ್ವಜನಿಕರಿಂದ ಸಂಗ್ರಹಿಸಿ ವಂಚಿಸಿದ್ದರು.

ಪ್ರವರ್ತಕರು ಹೂಡಿಕೆದಾರರನ್ನು ವಂಚಿಸಿದ್ದಾರೆ ಮತ್ತು ಅಸ್ಪಷ್ಟ ಆನ್‌ಲೈನ್ ವ್ಯಾಲೆಟ್‌ಗಳಲ್ಲಿ ಬಿಟ್‌ಕಾಯಿನ್‌ಗಳನ್ನು ಮರೆಮಾಚುತ್ತಿದ್ದಾರೆ ಎಂದು ಇ.ಡಿ ಆರೋಪಿಸಿದೆ.

ಕುಂದ್ರಾ ಅವರು ಉಕ್ರೇನ್‌ನಲ್ಲಿ ಬಿಟ್‌ಕಾಯಿನ್ ಮೈನಿಂಗ್ ಫಾರ್ಮ್ ಅನ್ನು ಸ್ಥಾಪಿಸಲು ಮಾಸ್ಟರ್‌ಮೈಂಡ್ ಮತ್ತು ಗೇನ್ ಬಿಟ್‌ಕಾಯಿನ್ ಪೊಂಜಿ "ಎಸ್" ಪ್ರವರ್ತಕರಾದ ಅಮಿತ್ ಭಾರದ್ವಾಜ್ ಅವರಿಂದ 285 ಬಿಟ್‌ಕಾಯಿನ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಕುಂದ್ರಾ ಅವರು ಇನ್ನೂ 285 ಬಿಟ್‌ಕಾಯಿನ್‌ಗಳನ್ನು ಇಟ್ಟುಕೊಂಡಿದ್ದಾರೆ. ಅವು ಸದ್ಯ 150 ಕೋಟಿ ರೂ. ಗಿಂತ ಹೆಚ್ಚು ಮೌಲ್ಯದ್ದಾಗಿವೆ ಎಂದು ಇ.ಡಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ಗೆ ಷರತ್ತುಬದ್ಧ ಜಾಮೀನು!

ರಾಜಸ್ಥಾನ: ಒತ್ತಡ ತಡೆಯಲಾಗದೇ ಕುಸಿದು ಬಿದ್ದು ಬಿಎಲ್ಒ ಸಾವು!

ಸಿದ್ದರಾಮಯ್ಯ 'ದಾಖಲೆಯ ಸಿಎಂ' ಆಗ್ತಾರಾ? ಡಿಕೆ ಶಿವಕುಮಾರ್ ಕಾಲೆಳೆದ ಯತ್ನಾಳ್!

ಅತ್ಯುನ್ನತ ಶಿಕ್ಷಣ ಪಡೆದು ಅಮೆರಿಕ ಬಿಟ್ಟು ಹೋಗುವುದು ನಾಚಿಕೆಗೇಡಿನ ಸಂಗತಿ: ಭಾರತೀಯರ ವಿರುದ್ಧ ಟ್ರಂಪ್ ಆಕ್ರೋಶ

SCROLL FOR NEXT