ರಾಜೀವ್ ಕುಮಾರ್ 
ದೇಶ

ಲೋಕಸಭಾ ಚುನಾವಣೆ: ನಾಳೆ ಮೊದಲ ಹಂತದ ಮತದಾನ, ಪ್ರತಿಯೊಂದು ಓಟು ನಿರ್ಣಾಯಕ ಎಂದ CEC!

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರತಿಯೊಂದು ಮತದ ಮಹತ್ವವನ್ನು ಜನರಿಗೆ ನೆನಪಿಸಿದ್ದಾರೆ. ಚುನಾವಣೆಯಲ್ಲಿ ಪ್ರತಿಯೊಂದು ಓಟು ನಿರ್ಣಾಯಕ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರತಿಯೊಂದು ಮತದ ಮಹತ್ವವನ್ನು ಜನರಿಗೆ ನೆನಪಿಸಿದ್ದಾರೆ. ಚುನಾವಣೆಯಲ್ಲಿ ಪ್ರತಿಯೊಂದು ಓಟು ನಿರ್ಣಾಯಕ ಎಂದು ಅವರು ಹೇಳಿದ್ದಾರೆ.

ಚುನಾವಣೆಗಳು ಭಾರತದ ಪ್ರಜಾಪ್ರಭುತ್ವದ ಅತ್ಯಂತ ಸುಂದರವಾದ ಅಭಿವ್ಯಕ್ತಿಯಾಗಿದೆ. "ಮತದಾನಕ್ಕೆ ಸಮಾನವಾದುದು ಯಾವುದೂ ಇಲ್ಲ" ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಬಿರು ಬಿಸಿಲಿನ ಹಿನ್ನೆಲೆಯಲ್ಲಿ ಜನರು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು, ಭಾರತೀಯ ಮತದಾರರ ಚೈತನ್ಯವು ಬೇಸಿಗೆಯ ಬಿಸಿಯನ್ನು ಸೋಲಿಸುತ್ತದೆ ಎಂದು ನನಗೆ ತಿಳಿದಿದೆ ಎಂದಿದ್ದಾರೆ.

ನಮ್ಮ ಪ್ರಜಾಪ್ರಭುತ್ವದಲ್ಲಿ, ಚುನಾವಣೆಗಳು ನಿಮಗೆ ಸೇರಿದ್ದು, ಆಯ್ಕೆಯು ನಿಮಗೆ ಸೇರಿದೆ. ನೀವು ಸರ್ಕಾರವನ್ನು ನಿರ್ಧರಿಸುತ್ತೀರಿ. ನಿಮ್ಮ ಸಲುವಾಗಿ, ನಿಮ್ಮ ಕುಟುಂಬ ಮತ್ತು ಮಕ್ಕಳಿಗಾಗಿ, ನಿಮ್ಮ ಗ್ರಾಮ ಅಥವಾ ಪಟ್ಟಣಕ್ಕಾಗಿ ಮತ್ತು ಸಹಜವಾಗಿ, ದೇಶಕ್ಕಾಗಿ ಎಂದಿರುವ ಅವರು,"ಚುನಾವಣಾ ಭಾಗವಹಿಸುವಿಕೆಯಲ್ಲಿ ಕ್ರಾಂತಿ ನಡೆಸಲು ಯುವ ಜನಾಂಗಕ್ಕೆ ಕರೆ ನೀಡುತ್ತೇನೆ. ಪ್ರತಿಯೊಂದು ಮತವು ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿಕೊಂಡಿರುವ 102 ಸ್ಥಾನಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಅರುಣಾಚಲ ಪ್ರದೇಶ (60 ಸ್ಥಾನಗಳು) ಮತ್ತು ಸಿಕ್ಕಿಂ (32 ಸ್ಥಾನಗಳು) ವಿಧಾನಸಭೆ ಚುನಾವಣೆಗಳು ಸಹ ಏಕಕಾಲದಲ್ಲಿ ನಡೆಯಲಿವೆ.

ಈ ಹಂತದಲ್ಲಿ 16.63 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಲ್ಲಿ 8.4 ಕೋಟಿ ಪುರುಷರು, 8.23 ​​ಕೋಟಿ ಮಹಿಳೆಯರು ಮತ್ತು 11,371 ತೃತೀಯಲಿಂಗಿಗಳು ಸೇರಿದ್ದಾರೆ. 35.67 ಲಕ್ಷ ಮೊದಲ ಬಾರಿಗೆ ಮತದಾರರಿದ್ದಾರೆ, ಜೊತೆಗೆ 20-29 ವರ್ಷ ವಯಸ್ಸಿನ 3.51 ಕೋಟಿ ಯುವ ಮತದಾರರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!