ರಾಜೀವ್ ಕುಮಾರ್ 
ದೇಶ

ಲೋಕಸಭಾ ಚುನಾವಣೆ: ನಾಳೆ ಮೊದಲ ಹಂತದ ಮತದಾನ, ಪ್ರತಿಯೊಂದು ಓಟು ನಿರ್ಣಾಯಕ ಎಂದ CEC!

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರತಿಯೊಂದು ಮತದ ಮಹತ್ವವನ್ನು ಜನರಿಗೆ ನೆನಪಿಸಿದ್ದಾರೆ. ಚುನಾವಣೆಯಲ್ಲಿ ಪ್ರತಿಯೊಂದು ಓಟು ನಿರ್ಣಾಯಕ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರತಿಯೊಂದು ಮತದ ಮಹತ್ವವನ್ನು ಜನರಿಗೆ ನೆನಪಿಸಿದ್ದಾರೆ. ಚುನಾವಣೆಯಲ್ಲಿ ಪ್ರತಿಯೊಂದು ಓಟು ನಿರ್ಣಾಯಕ ಎಂದು ಅವರು ಹೇಳಿದ್ದಾರೆ.

ಚುನಾವಣೆಗಳು ಭಾರತದ ಪ್ರಜಾಪ್ರಭುತ್ವದ ಅತ್ಯಂತ ಸುಂದರವಾದ ಅಭಿವ್ಯಕ್ತಿಯಾಗಿದೆ. "ಮತದಾನಕ್ಕೆ ಸಮಾನವಾದುದು ಯಾವುದೂ ಇಲ್ಲ" ಎಂದು ಅವರು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಬಿರು ಬಿಸಿಲಿನ ಹಿನ್ನೆಲೆಯಲ್ಲಿ ಜನರು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು, ಭಾರತೀಯ ಮತದಾರರ ಚೈತನ್ಯವು ಬೇಸಿಗೆಯ ಬಿಸಿಯನ್ನು ಸೋಲಿಸುತ್ತದೆ ಎಂದು ನನಗೆ ತಿಳಿದಿದೆ ಎಂದಿದ್ದಾರೆ.

ನಮ್ಮ ಪ್ರಜಾಪ್ರಭುತ್ವದಲ್ಲಿ, ಚುನಾವಣೆಗಳು ನಿಮಗೆ ಸೇರಿದ್ದು, ಆಯ್ಕೆಯು ನಿಮಗೆ ಸೇರಿದೆ. ನೀವು ಸರ್ಕಾರವನ್ನು ನಿರ್ಧರಿಸುತ್ತೀರಿ. ನಿಮ್ಮ ಸಲುವಾಗಿ, ನಿಮ್ಮ ಕುಟುಂಬ ಮತ್ತು ಮಕ್ಕಳಿಗಾಗಿ, ನಿಮ್ಮ ಗ್ರಾಮ ಅಥವಾ ಪಟ್ಟಣಕ್ಕಾಗಿ ಮತ್ತು ಸಹಜವಾಗಿ, ದೇಶಕ್ಕಾಗಿ ಎಂದಿರುವ ಅವರು,"ಚುನಾವಣಾ ಭಾಗವಹಿಸುವಿಕೆಯಲ್ಲಿ ಕ್ರಾಂತಿ ನಡೆಸಲು ಯುವ ಜನಾಂಗಕ್ಕೆ ಕರೆ ನೀಡುತ್ತೇನೆ. ಪ್ರತಿಯೊಂದು ಮತವು ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರದಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿಕೊಂಡಿರುವ 102 ಸ್ಥಾನಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಅರುಣಾಚಲ ಪ್ರದೇಶ (60 ಸ್ಥಾನಗಳು) ಮತ್ತು ಸಿಕ್ಕಿಂ (32 ಸ್ಥಾನಗಳು) ವಿಧಾನಸಭೆ ಚುನಾವಣೆಗಳು ಸಹ ಏಕಕಾಲದಲ್ಲಿ ನಡೆಯಲಿವೆ.

ಈ ಹಂತದಲ್ಲಿ 16.63 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಲ್ಲಿ 8.4 ಕೋಟಿ ಪುರುಷರು, 8.23 ​​ಕೋಟಿ ಮಹಿಳೆಯರು ಮತ್ತು 11,371 ತೃತೀಯಲಿಂಗಿಗಳು ಸೇರಿದ್ದಾರೆ. 35.67 ಲಕ್ಷ ಮೊದಲ ಬಾರಿಗೆ ಮತದಾರರಿದ್ದಾರೆ, ಜೊತೆಗೆ 20-29 ವರ್ಷ ವಯಸ್ಸಿನ 3.51 ಕೋಟಿ ಯುವ ಮತದಾರರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

ಜುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ'ಬಿಗ್ ಟ್ವಿಸ್ಟ್': ಸ್ಪೋಟಕ ಮಾಹಿತಿ ಹೊರಹಾಕಿದ Bandmate ಶೇಖರ್ ಜ್ಯೋತಿ ಗೋ ಸ್ವಾಮಿ!

Cricket: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ODI ನಾಯಕರಾಗಿ ಶುಭ್ ಮನ್ ಗಿಲ್ ಆಯ್ಕೆ, Ro-KO ವಾಪಸ್!

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

SCROLL FOR NEXT