ಸುಪ್ರೀಂಕೋರ್ಟ್ 
ದೇಶ

EVMನಲ್ಲಿ ದಾಖಲಾದ ಮತಗಳನ್ನು VVPAT ಮೂಲಕ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮೊದಲ ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೈರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೈರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಅರ್ಜಿಗಳ ಕುರಿತಂತೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ನೇತೃತ್ವದ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ದಲಾಯಿಸಿ ಅಪಾರದರ್ಶಕ ಗಾಜು ಅಳವಡಿಸಿದ 2017ರ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಗೊಳಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ. ಬದಲಾದ ಗಾಜಿನ ಮೂಲಕ ಮತದಾರರು ಏಳು ಸೆಕೆಂಡುಗಳ ಕಾಲ ಲೈಟ್ ಆನ್ ಆಗಿರುವಾಗ ಮಾತ್ರ ಮತದಾನ ಮಾಡಿದ ಟಿಯನ್ನು ನೋಡಬಹುದಾಗಿದೆ.

ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್, ಇವಿಎಂ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿದರು. ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಮತ್ತು ಗೋಪಾಲ್ ಶಂಕರನಾರಾಯಣ್ ವಾದ ಮಂಡಿಸಿದ್ದರು. ಏಪ್ರಿಲ್ 16 ರಂದು ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಕುರಿತಾದ ಟೀಕೆಗಳು ಮತ್ತು ಮತ್ತೆ ಮತ ಪತ್ರಗಳ ಮೂಲಕ ಮತದಾನ ನಡೆಸಬೇಕೆಂಬ ಮನವಿಗಳನ್ನು ನ್ಯಾಯಾಲಯ ತಳ್ಳಿ ಹಾಕಿತ್ತು. ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯು ಬೃಹತ್ ಪ್ರಮಾಣದ್ದಾಗಿದ್ದು, ಇರುವ ವ್ಯವಸ್ಥೆಯನ್ನು ಉರುಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT