ಸಾಂದರ್ಭಿಕ ಚಿತ್ರ  
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಬಿಹಾರದ ವಲಸೆ ಕಾರ್ಮಿಕನ ಹತ್ಯೆ

ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಶ್ರೀನಗರ: ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಉದ್ದೇಶಪೂರ್ವಕವಾಗಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಅನಂತನಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ರಾಜು ಶಾ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರರು ರಾಜು ಶಾ ಮೇಲೆ ಗುಂಡು ಹಾರಿಸಿದ್ದರು. ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗೆ ರಾಜು ಶಾ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳವಳಕಾರಿ ಸಂಗತಿಯೆಂದರೆ, 10 ದಿನಗಳ ಅಂತರದಲ್ಲಿ ನಡೆದ ಎರಡನೇ ಕಾರ್ಮಿಕನ ಹತ್ಯೆಯಾಗಿದೆ. ಏಪ್ರಿಲ್ 8 ರಂದು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸ್ಥಳೀಯರಲ್ಲದ ಚಾಲಕನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದರು. ಇದು ಕಾಶ್ಮೀರದಲ್ಲಿನ ವಲಸಿಗರನ್ನು ಆತಂಕಕ್ಕೀಡು ಮಾಡಿದೆ.

ಉನ್ನತ ಪೊಲೀಸ್ ಅಧಿಕಾರಿಗಳ ಪ್ರಕಾರ, ಬಿಹಾರಿ ಕಾರ್ಮಿಕ ರಾಜಾ ಇಲ್ಲಿ ವಸ್ತುಗಳ ಮಾರಾಟ ಕೆಲಸ ಮಾಡಿಕೊಂಡಿದ್ದ. ಉಗ್ರರು ಈತನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ತೀರಾ ಹತ್ತಿರದಿಂದ (ಪಾಯಿಂಟ್​ ಬ್ಲಾಕ್​ ರೇಂಜ್) ಬುಲೆಟ್​ ಹಾರಿಸಲಾಗಿದೆ. ಇದರಿಂದ ಕಾರ್ಮಿಕನ ಹೊಟ್ಟೆ ಮತ್ತು ಕುತ್ತಿಗೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮೃತಪಟ್ಟಿದ್ದಾರೆ. ಘಟನೆಯ ನಂತರ, ದಾಳಿಕೋರರ ಪತ್ತೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿವೆ.

ವಲಸಿಗ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಯನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಗುಲಾಂ ನಬಿ ಆಜಾದ್​ ಸೇರಿದಂತೆ ಹಲವರು ಖಂಡಿಸಿದ್ದಾರೆ. "ಇದೊಂದು ಅವಿವೇಕದ ಹಿಂಸಾಚಾರವಾಗಿದೆ. ಕಾರ್ಮಿಕನನ್ನು ಕಳೆದುಕೊಂಡ ಕುಟುಂಬಕ್ಕೆ ನನ್ನ ಸಂತಾಪಗಳು" ಎಂದು ಮೆಹಬೂಬಾ ಮುಫ್ತಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ