ರಾಹುಲ್ ಗಾಂಧಿ 
ದೇಶ

ಬಿಜೆಪಿ 150 ಸೀಟು ದಾಟುವುದಿಲ್ಲ, ಸಂವಿಧಾನ ಬದಲಿಸುವ ಯತ್ನವನ್ನು INDIA ವಿಫಲಗೊಳಿಸುತ್ತದೆ: ರಾಹುಲ್ ಗಾಂಧಿ

ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ವಿಫಲಗೊಳಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಭಾಗಲ್ಪುರ್‌: ಕೇಂದ್ರದ ಆಡಳಿತಾರೂಢ ಬಿಜೆಪಿ ಸಂವಿಧಾನ "ಬದಲಿಸಲು" ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ವಿಫಲಗೊಳಿಸುತ್ತದೆ ಎಂದು ಶನಿವಾರ ಹೇಳಿದ್ದಾರೆ.

ಇಂದು ಬಿಹಾರದ ಭಾಗಲ್ಪುರ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯಲ್ಲಿ 370 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಹೇಳಿಕೆಗೆ ವ್ಯಂಗ್ಯವಾಡಿದರು. "ಅವರ ಸಂಖ್ಯೆ 150 ದಾಟುವುದಿಲ್ಲ" ಎಂದು ಪ್ರತಿಪಾದಿಸಿದರು.

"ಈ ಬಿಜೆಪಿಯವರು 370ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಆದರೆ 150 ಕ್ಕಿಂತ ಒಂದೇ ಒಂದು ಸ್ಥಾನ ಸಹ ಹೆಚ್ಚು ಪಡೆಯುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ" ಎಂದಿದ್ದಾರೆ.

"ಇಂಡಿಯಾ ಮೈತ್ರಿಕೂಟ ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಒಟ್ಟಾಗಿ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿವೆ" ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರೋಪಿಸಿದರು.

‘ದೇಶದ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಏನೆಲ್ಲ ಸಿಕ್ಕಿದೆಯೋ ಅದಕ್ಕೆ ಸಂವಿಧಾನವೇ ಕಾರಣ. ಸಂವಿಧಾನವನ್ನು ಬದಲಿಸಿದರೆ ಎಲ್ಲವೂ ಅಂತ್ಯವಾಗುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT