ರಾಹುಲ್ ಗಾಂಧಿ 
ದೇಶ

ಬಿಜೆಪಿ 150 ಸೀಟು ದಾಟುವುದಿಲ್ಲ, ಸಂವಿಧಾನ ಬದಲಿಸುವ ಯತ್ನವನ್ನು INDIA ವಿಫಲಗೊಳಿಸುತ್ತದೆ: ರಾಹುಲ್ ಗಾಂಧಿ

ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ವಿಫಲಗೊಳಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಭಾಗಲ್ಪುರ್‌: ಕೇಂದ್ರದ ಆಡಳಿತಾರೂಢ ಬಿಜೆಪಿ ಸಂವಿಧಾನ "ಬದಲಿಸಲು" ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನ ಬದಲಿಸುವ ಯತ್ನವನ್ನು ವಿಫಲಗೊಳಿಸುತ್ತದೆ ಎಂದು ಶನಿವಾರ ಹೇಳಿದ್ದಾರೆ.

ಇಂದು ಬಿಹಾರದ ಭಾಗಲ್ಪುರ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯಲ್ಲಿ 370 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಹೇಳಿಕೆಗೆ ವ್ಯಂಗ್ಯವಾಡಿದರು. "ಅವರ ಸಂಖ್ಯೆ 150 ದಾಟುವುದಿಲ್ಲ" ಎಂದು ಪ್ರತಿಪಾದಿಸಿದರು.

"ಈ ಬಿಜೆಪಿಯವರು 370ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಆದರೆ 150 ಕ್ಕಿಂತ ಒಂದೇ ಒಂದು ಸ್ಥಾನ ಸಹ ಹೆಚ್ಚು ಪಡೆಯುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ" ಎಂದಿದ್ದಾರೆ.

"ಇಂಡಿಯಾ ಮೈತ್ರಿಕೂಟ ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಒಟ್ಟಾಗಿ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿವೆ" ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರೋಪಿಸಿದರು.

‘ದೇಶದ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಏನೆಲ್ಲ ಸಿಕ್ಕಿದೆಯೋ ಅದಕ್ಕೆ ಸಂವಿಧಾನವೇ ಕಾರಣ. ಸಂವಿಧಾನವನ್ನು ಬದಲಿಸಿದರೆ ಎಲ್ಲವೂ ಅಂತ್ಯವಾಗುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT