ಸಿಜೆಐ ಚಂದ್ರಚೂಡ್  online desk
ದೇಶ

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಸಿಜೆಐ ಚಂದ್ರಚೂಡ್ ಶ್ಲಾಘನೆ

ಹೊಸದಾಗಿ ಪರಿಚಯಿಸಲಾಗಿರುವ ಕ್ರಿಮಿನಲ್ ಕಾನೂನುಗಳು ಸಮಾಜದ ದಿಕ್ಕನ್ನು ಬದಲಿಸುತ್ತವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಹೊಸದಾಗಿ ಪರಿಚಯಿಸಲಾಗಿರುವ ಕ್ರಿಮಿನಲ್ ಕಾನೂನುಗಳು ಸಮಾಜದ ದಿಕ್ಕನ್ನು ಬದಲಿಸುತ್ತವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾ.ಚಂದ್ರಚೂಡ್, ಭಾರತ ತನ್ನ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಕಾಣಲು ಸಿದ್ಧವಿದೆ, ನಾವು ಪ್ರಜೆಗಳನ್ನು ಅದನ್ನು ಅಳವಡಿಸಿಕೊಂಡಲ್ಲಿ ಮಾತ್ರ ಅವುಗಳು ಯಶಸ್ವಿಯಾಗಲಿದೆ ಎಂದು ನ್ಯಾ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.

ಹೊಸದಾಗಿ ಜಾರಿಗೆ ತಂದ ಕಾನೂನುಗಳು ಅಪರಾಧ ನ್ಯಾಯದ ಕುರಿತ ಭಾರತದ ಕಾನೂನು ಚೌಕಟ್ಟನ್ನು ಹೊಸ ಯುಗಕ್ಕೆ ಪರಿವರ್ತಿಸಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಲಿಪಶುಗಳ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಅಪರಾಧಗಳ ತನಿಖೆ ಮತ್ತು ಕಾನೂನು ಕ್ರಮವನ್ನು ಸಮರ್ಥವಾಗಿ ಕೈಗೊಳ್ಳಲು ಹೆಚ್ಚು ಅಗತ್ಯವಿರುವ ಸುಧಾರಣೆಗಳನ್ನು ಪರಿಚಯಿಸಲಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತಂದ ಕಾನೂನುಗಳು -- ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1 ರಿಂದ ಜಾರಿಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT