ಕೆ.ಅಣ್ಣಾಮಲೈ 
ದೇಶ

ತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ

ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಶುಕ್ರವಾರ ಶೇ.72 ರಷ್ಟು ಮತದಾನವಾಗಿದೆ. ಕೊಯಮತ್ತೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೂ ಆಗಿರುವ ಅಣ್ಣಾಮಲೈ, ಮತದಾರರ ಪಟ್ಟಿಯಿಂದ ಹಲವಾರು ಬಿಜೆಪಿ ಕಾರ್ಯಕರ್ತರ ಹೆಸರು ನಾಪತ್ತೆಯಾಗಿರುವುದರ ಹಿಂದೆ ರಾಜಕೀಯ ಹಸ್ತಕ್ಷೇಪ ನಡೆದಿರುವ ಶಂಕೆ ಇದೆ ಎಂದು ಹೇಳಿದರು.

ತಮಿಳುನಾಡಿನ ಸುಮಾರು 6.23 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, 950 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದ್ದು. ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 63.7ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ; ಬಹುಮಾನ ಘೋಷಣೆ

ಏನಾಗ್ತಿದೆ ಅಮೇರಿಕಾದಲ್ಲಿ?: ಸೇನಾ ಮುಖ್ಯಸ್ಥರನ್ನು ಕಿತ್ತೆಸೆದ ಬೆನ್ನಲ್ಲೇ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗೆ Fraud Czar ಪಟ್ಟ ಕಟ್ಟಿದ ಟ್ರಂಪ್!

ಚುನಾವಣೆಗೂ ಮುನ್ನವೇ TVK ವಿಜಯ್‌ಗೆ ಸಂಕಷ್ಟ? ಎರಡು ಕಡೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತ ಸಾಧ್ಯತೆ!

ಗಗನಯಾನಿಗಳು ಅಂತರಿಕ್ಷದಲ್ಲಿ Sex ಮಾಡಬಹುದಾ? ಭಾರಿ ಚರ್ಚೆಗೆ ಕಾರಣವಾಯ್ತು PornHub ಕಂಟೆಂಟ್!

Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ

SCROLL FOR NEXT