ಕೆ.ಅಣ್ಣಾಮಲೈ 
ದೇಶ

ತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ

ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಶುಕ್ರವಾರ ಶೇ.72 ರಷ್ಟು ಮತದಾನವಾಗಿದೆ. ಕೊಯಮತ್ತೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೂ ಆಗಿರುವ ಅಣ್ಣಾಮಲೈ, ಮತದಾರರ ಪಟ್ಟಿಯಿಂದ ಹಲವಾರು ಬಿಜೆಪಿ ಕಾರ್ಯಕರ್ತರ ಹೆಸರು ನಾಪತ್ತೆಯಾಗಿರುವುದರ ಹಿಂದೆ ರಾಜಕೀಯ ಹಸ್ತಕ್ಷೇಪ ನಡೆದಿರುವ ಶಂಕೆ ಇದೆ ಎಂದು ಹೇಳಿದರು.

ತಮಿಳುನಾಡಿನ ಸುಮಾರು 6.23 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, 950 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದ್ದು. ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 63.7ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT