ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ 
ದೇಶ

ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಆದರೆ ಪ್ರಧಾನಿ ಮೋದಿಯನ್ನು ಆರಾಧಿಸುವ ಪಂಥವಾಗಿದೆ: ಪಿ ಚಿದಂಬರಂ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, ಕೇಸರಿ ಪಕ್ಷವು ಸಾಂಪ್ರದಾಯಿಕ ರಾಜಕೀಯ ಪಕ್ಷವಾಗಿ ಉಳಿದಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ ಮತ್ತು ಪ್ರಚಾರದ ಪಂಥವಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ತಿರುವನಂತಪುರ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, ಕೇಸರಿ ಪಕ್ಷವು ಸಾಂಪ್ರದಾಯಿಕ ರಾಜಕೀಯ ಪಕ್ಷವಾಗಿ ಉಳಿದಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ ಮತ್ತು ಪ್ರಚಾರದ ಪಂಥವಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ 'ಗಂಭೀರ ಹರಣ' ನಡೆಯುತ್ತಿದೆ. ಹೀಗಾಗಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಜನರು ಮುಂದಾಗಬೇಕು ಎಂದರು.

ಮೋದಿ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸದಿದ್ದರೂ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲಾಗುವುದು. ತಮಿಳುನಾಡಿನ ಎಲ್ಲ 39 ಸ್ಥಾನಗಳು ಮತ್ತು ಪುದುಚೆರಿಯ ಒಂದು ಸ್ಥಾನವನ್ನು ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂದು ಹೇಳಿದರು.

'ಬಿಜೆಪಿಯು 14 ದಿನಗಳಲ್ಲಿ ಪ್ರಣಾಳಿಕೆಯನ್ನು ರಚಿಸಿದೆ. ಪ್ರಣಾಳಿಕೆಗೆ ಹೆಸರಿಟ್ಟಿಲ್ಲ. ಅವರು ಅದನ್ನು ಮೋದಿ ಗ್ಯಾರಂಟಿ ಎಂದು ಕರೆದರು. ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಇದು ಆರಾಧನೆ ಮಾಡುವ ಪಂಥವಾಗಿ ಮಾರ್ಪಟ್ಟಿದೆ ಮತ್ತು ಇದು ನರೇಂದ್ರ ಮೋದಿಯನ್ನು ಮಾತ್ರ ಆರಾಧಿಸುತ್ತದೆ' ಎಂದು ಚಿದಂಬರಂ ಹೇಳಿದರು.

'ಮೋದಿ ಕಿ ಗ್ಯಾರಂಟಿ' ಎಂದರೆ ಆರಾಧನೆ ಮಾಡುವುದೆಂದು ದೇಶದ ಎಲ್ಲರಿಗೂ ನೆನಪಿಸುತ್ತದೆ. ಭಾರತದಲ್ಲಿ ಆ ಆರಾಧನೆಯು ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಅದು ಸರ್ವಾಧಿಕಾರಕ್ಕೆ ಕಾರಣವಾಗುತ್ತದೆ. ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಹೊಡೆತ ಬಿದ್ದಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ನಾವು ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು. ದೇಶ ಎದುರಿಸುತ್ತಿರುವ ದೊಡ್ಡ ಸವಾಲೆಂದರೆ ನಿರುದ್ಯೋಗವಾಗಿದೆ ಎಂದು ಚಿದಂಬರಂ ಹೇಳಿದರು

ಕಾಂಗ್ರೆಸ್ ಪ್ರಣಾಳಿಕೆಯು ಉದ್ಯೋಗ ಸೃಷ್ಟಿ ಮತ್ತು ಸಂಪತ್ತು ಉತ್ಪಾದನೆ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಸಿಪಿಐ(ಎಂ) ಮೌನವಾಗಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಸಿಎಎ ರದ್ದುಗೊಳಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT