ದೂರದರ್ಶನ 
ದೇಶ

DOORDARSHAN ಲಾಂಛನದ ಬಣ್ಣ ಬದಲು: ಕೇಸರಿಕರಣದ ಮುನ್ಸೂಚನೆ ಎಂದ ತಮಿಳುನಾಡು ಸಿಎಂ MK ಸ್ಟಾಲಿನ್

ಸರ್ಕಾರಿ ಸ್ವಾಮ್ಯದ ದೂರದರ್ಶನದ ಲಾಂಛನದ ಬಣ್ಣ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ MK ಸ್ಟಾಲಿನ್ ಕೇಸರಿಕರಣದ ಮುನ್ಸೂಚನೆ ಎಂದಿದ್ದಾರೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರದರ್ಶನದ ಲಾಂಛನದ ಬಣ್ಣ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಿಎಂ MK ಸ್ಟಾಲಿನ್ ಕೇಸರಿಕರಣದ ಮುನ್ಸೂಚನೆ ಎಂದಿದ್ದಾರೆ.

ದೂರದರ್ಶನದ (ಡಿಡಿ) ಲಾಂಛನವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಪಿತೂರಿಯ ಪೂರ್ವಭಾವಿ ಪ್ರಯತ್ನ ಇದು ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸ್ಟಾಲಿನ್, 'ದೂರದರ್ಶನಕ್ಕೆ ‘ಕೇಸರಿ ಕಲೆ’ ನೀಡಲಾಗಿದೆ. ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಷಡ್ಯಂತ್ರ ಇದು. ಲಾಂಛನದ ಬಣ್ಣ ಬದಲಾವಣೆಯಂತಹ ಕ್ರಮಗಳು ಕೇಸರಿಕರಣದ ಪೂರ್ವಭಾವಿ ಪ್ರಯತ್ನಕ್ಕೆ ಉದಾಹರಣೆ. 2024ರ ಲೋಕಸಭಾ ಚುನಾವಣಾ ಫಲಿತಾಂಶ ಅಂತಹ ಫ್ಯಾಸಿಸಂ ಶಕ್ತಿಗಳ ವಿರುದ್ಧ ಸಾರ್ವಜನಿಕ ಪ್ರತಿರೋಧವನ್ನು ತೋರಿಸಲಿದೆ' ಎಂದು ಅವರು ಹೇಳಿದ್ದಾರೆ.

ಈ ಹಿಂದೆ ತಮಿಳು ಕವಿ ತಿರುವಳ್ಳುವರ್ ಅವರನ್ನು ಕೇಸರಿಮಯಗೊಳಿಸಲಾಗಿತ್ತು. ತಮಿಳುನಾಡಿನ ಮಹಾನ್ ನಾಯಕರ ಪ್ರತಿಮೆಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು ಎಂದೂ ಸ್ಟಾಲಿನ್ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT