ಉದ್ಧವ್ ಠಾಕ್ರೆ online
ದೇಶ

ಆದಿತ್ಯ ಠಾಕ್ರೆಯನ್ನು ಸಿಎಂ ಹುದ್ದೆಗೇರಲು ಮಾರ್ಗದರ್ಶನ ನೀಡುವುದಾಗಿ ಫಡ್ನವೀಸ್ ಮಾತು ಕೊಟ್ಟಿದ್ದರು: ಉದ್ಧವ್ ಠಾಕ್ರೆ

ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ನಾಯಕ ಉದ್ಧವ್ ಠಾಕ್ರೆ ಬಿಜೆಪಿ ನಾಯಕ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಮುಂಬೈ: ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ನಾಯಕ ಉದ್ಧವ್ ಠಾಕ್ರೆ ಬಿಜೆಪಿ ನಾಯಕ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. 2019 ರಲ್ಲಿ ದೇವೇಂದ್ರ ಫಡ್ನವಿಸ್ ತಮಗೆ ತಮ್ಮ ಪುತ್ರ ಆದಿತ್ಯ ಠಾಕ್ರೆಯನ್ನು ಮುಖ್ಯಮಂತ್ರಿ ಸ್ಥಾನಕ್ಕೇರುವ ರೀತಿಯಲ್ಲಿ ಬೆಳೆಸುವುದಾಗಿ ಭರವಸೆ ನೀಡಿದ್ದರು, ಇದು ಶಿವಸೇನೆ-ಬಿಜೆಪಿ ನಡುವಿನ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ಒಪ್ಪಂದದ ಭಾಗವಾಗಿತ್ತು ಎಂದು ಠಾಕ್ರೆ ತಿಳಿಸಿದ್ದಾರೆ.

ಇದಷ್ಟೇ ಅಲ್ಲದೇ ತಾವು ಇನ್ನು 2-3 ವರ್ಷಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗುವುದಾಗಿ ಫಡ್ನವಿಸ್ ಹೇಳಿದ್ದರು ಎಂದು ಠಾಕ್ರೆ ತಿಳಿಸಿದ್ದಾರೆ.

ಧಾರಾವಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಆಗಿನ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರು ಶಿವಸೇನೆ (ಅವಿಭಜಿತ) ಜೊತೆ ಮೈತ್ರಿ ಮಾಡಿಕೊಳ್ಳಲು ತಮ್ಮ ನಿವಾಸ 'ಮಾತೋಶ್ರೀ'ಗೆ ಬಂದಿದ್ದರು. "ಆ ಸಮಯದಲ್ಲಿ, ಇಬ್ಬರು ನಾಯಕರು (ಶಾ ಮತ್ತು ಠಾಕ್ರೆ) ಸ್ಥಾನ ಹಂಚಿಕೆ ವಿಧಾನಗಳ ಬಗ್ಗೆ ಚರ್ಚಿಸುತ್ತಿರುವಾಗ ಫಡ್ನವೀಸ್ ಅವರನ್ನು ದಿವಂಗತ ಬಾಳ್ ಠಾಕ್ರೆ ಅವರ ಕೋಣೆಯ ಹೊರಗೆ ಕುಳಿತುಕೊಳ್ಳುವಂತೆ ಮಾಡಲಾಯಿತು" ಎಂಬುದನ್ನು ಉದ್ಧವ್ ಠಾಕ್ರೆ ನೆನಪಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು 2.5 ವರ್ಷಗಳವರೆಗೆ (ಬಿಜೆಪಿ ಮತ್ತು ಶಿವಸೇನೆ-ಅವಿಭಜಿತ ನಡುವೆ) ಹಂಚಿಕೊಳ್ಳಲಾಗುವುದು ಎಂದು ನನಗೆ ಅಂದು ಭರವಸೆ ನೀಡಲಾಗಿತ್ತು.

"ನಾನು ಆದಿತ್ಯ ಠಾಕ್ರೆಗೆ 2.5 ವರ್ಷಗಳ ಕಾಲ ಸಿಎಂ ಆಗಿರಲು ಮಾರ್ಗದರ್ಶನ ನೀಡುತ್ತೇನೆ. ನಾವು 2.5 ವರ್ಷಗಳ ನಂತರ ಅವರನ್ನು ಸಿಎಂ ಮಾಡಬಹುದು ಎಂದು ದೇವೇಂದ್ರ ಫಡ್ನವಿಸ್ ನನಗೆ ಹೇಳಿದ್ದರು ಎಂಬುದನ್ನು ಠಾಕ್ರೆ ಈಗ ಬಹಿರಂಗಪಡಿಸಿದ್ದಾರೆ.

ನಿಮ್ಮಂಥಹ ಹಿರಿಯ ನಾಯಕರು ಆದಿತ್ಯ ಸಂಪುಟದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತೀರಿ? ಎಂಬ ನನ್ನ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದ ಫಡ್ನವೀಸ್ ಇನ್ನೆರಡು ಮೂರು ವರ್ಷಗಳಲ್ಲಿ ರಾಷ್ಟ್ರ ರಾಜಕಾರಣಕ್ಕೆ ತೆರಳುವುದಾಗಿ ಫಡ್ನವೀಸ್ ಹೇಳಿದ್ದರು ಎಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಈ ಹೇಳಿಕೆ ಸಂಚಲನ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

SCROLL FOR NEXT