ನರೇಂದ್ರ ಮೋದಿ 
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತು ಮುಸ್ಲಿಮರಿಗೆ ಮರುಹಂಚಿಕೆ: ಮೋದಿ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದ್ದು, ಅವರು ಜನರ ಭಾವನೆಗಳನ್ನು ತಿಳಿಸಿದ್ದಾರೆ ಎಂದು ಸೋಮವಾರ ಪ್ರತಿಪಾದಿಸಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು, ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಹಿಂದಿನ ಕನ್ನಡಿ ತೋರಿಸಿದ್ದರಿಂದ ಪ್ರತಿಪಕ್ಷಗಳು ನೋವು ಅನುಭವಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ಜನರ ಪ್ರತಿಧ್ವನಿಯಾಗಿದೆ. ಏಕೆಂದರೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾಗೆ, ದೇಶವಾಸಿಗಳಿಗಿಂತ ಅಕ್ರಮವಾಗಿ ದೇಶ ಪ್ರವೇಶಿಸಿದ ಮುಸ್ಲಿಮರೇ ಹೆಚ್ಚು ಮುಖ್ಯ ಎಂದು ಭಾಟಿಯಾ ಆರೋಪಿಸಿದರು.

ನಿನ್ನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು "ನುಸುಳುಕೋರರು" ಮತ್ತು "ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ" ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

2006ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಲ್ಪಸಂಖ್ಯಾತರಿಗೆ, ವಿಶೇಷವಾಗಿ ಮುಸ್ಲಿಮರಿಗೆ ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕು ಎಂದು ಹೇಳಲಿಲ್ಲವೇ ಎಂದು ಭಾಟಿಯಾ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಚುನಾವಣಾ ಲಾಭಕ್ಕಾಗಿ ಕೋಮು ಧ್ರುವೀಕರಣ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದಿದ್ದನ್ನು ಉಲ್ಲೇಖಿಸುತ್ತಿದ್ದಾರೆ ಮತ್ತು ಅವರು ಚುನಾವಣಾ ಲಾಭಕ್ಕಾಗಿ ದೇಶದಲ್ಲಿ "ಕೋಮು ಧ್ರುವೀಕರಣ" ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT