ಎಎಪಿ ಸಚಿವೆ ಅತಿಶಿ 
ದೇಶ

ಕೇಜ್ರಿವಾಲ್ ಇನ್ಸುಲಿನ್ ಅಗತ್ಯತೆ ಕುರಿತು ಏಮ್ಸ್ ವೈದ್ಯರ ಸಲಹೆ ಪಡೆದಿರುವುದಾಗಿ ಇಡಿ ಸುಳ್ಳು ಹೇಳಿದೆ: AAP ಆರೋಪ

ಮಧುಮೇಹಿಯಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯತೆ ಕುರಿತು ಬಗ್ಗೆ ಏಮ್ಸ್‌ನ ತಜ್ಞರಿಂದ ಸಲಹೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ "ಸುಳ್ಳು" ಹೇಳುತ್ತಿದೆ ಎಂದು ಎಎಪಿ ಸಚಿವೆ ಅತಿಶಿ ಅವರು ಸೋಮವಾರ ಆರೋಪ ಮಾಡಿದ್ದಾರೆ.

ನವದೆಹಲಿ: ಮಧುಮೇಹಿಯಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯತೆ ಕುರಿತು ಬಗ್ಗೆ ಏಮ್ಸ್‌ನ ತಜ್ಞರಿಂದ ಸಲಹೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ "ಸುಳ್ಳು" ಹೇಳುತ್ತಿದೆ ಎಂದು ಎಎಪಿ ಸಚಿವೆ ಅತಿಶಿ ಅವರು ಸೋಮವಾರ ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಡಿ ನ್ಯಾಯಾಲಯದಲ್ಲಿ ಸುಳ್ಳು ಹೇಳಿದೆ. ಇನ್ಸುಲಿನ್ ಬಗ್ಗೆ ಏಮ್ಸ್‌ನ ತಜ್ಞರನ್ನು ಸಂಪರ್ಕಿಸಲಾಗಿದ್ದು, ಇನ್ಸುಲಿನ್ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ ಮತ್ತು ಕೇಜ್ರಿವಾಲ್‌ಗಾಗಿ ಡಯಟ್ ಚಾರ್ಟ್ ನ್ನೂ ಕೂಡ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಇದೆಲ್ಲವೂ ಸುಳ್ಳು ಎಂದು ಹೇಳಿದ್ದಾರೆ.

ಆದರೆ, ಈ ಡಯಟ್ ಚಾರ್ಟ್ ಅನ್ನು ಎಂಡೋಕ್ರೈನಾಲಜಿಸ್ಟ್ ಅಥವಾ ಡಯಾಬಿಟಾಲಜಿಸ್ಟ್ ಸಿದ್ಧಪಡಿಸಿಲ್ಲ, ಆದರೆ ಡಯಟಿಶಿಯನ್ ಸಿದ್ಧಪಡಿಸಿದ್ದಾರೆ. ಡಯಟಿಶಿಯನ್ ಎಂಬಿಬಿಎಸ್ ವೈದ್ಯರಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆ ಡಯಟ್ ಚಾರ್ಟ್ ಆಧಾರದ ಮೇಲೆ ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿಲ್ಲ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ ಎಂದು ತಿಳಿಸಿದ್ದಾರೆ.

ಕಾರಾಗೃಹದ ಅಧಿಕಾರಿಗಳು ಮಾತನಾಡಿ, ಶನಿವಾರ AIIMS ನ ತಜ್ಞರು ಹಾಗೂ ಕೇಜ್ರಿವಾಲ್ ಅವರೊಂದಿಗೆ ವೀಡಿಯೊ ಕಾನ್ಫರೆನ್ಸ್ ಅನ್ನು ಏರ್ಪಡಿಸಿತ್ತು, ಈ ಸಮಯದಲ್ಲಿ "ಇನ್ಸುಲಿನ್ ಬಗ್ಗೆ ಕೇಜ್ರಿವಾಲ್ ಪ್ರಸ್ತಾಪಿಸಲಿಲ್ಲ ಅಥವಾ ವೈದ್ಯರು ಸೂಚಿಸಲಿಲ್ಲ ಎಂದು ಹೇಳಿದ್ದಾರೆ.

40 ನಿಮಿಷಗಳ ಸಮಾಲೋಚನೆಯ ನಂತರ, ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂದು ಕೇಜ್ರಿವಾಲ್ ಅವರಿಗೆ ಭರವಸೆ ನೀಡಲಾಯಿತು. ಔಷಧಿಗಳನ್ನು ಮುಂದುವರಿಸಲು ಸಲಹೆ ನೀಡಲಾಯಿತು, ಇದನ್ನು ನಿಯಮಿತವಾಗಿ ಮೌಲ್ಯಮಾಪನ ಮತ್ತು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರತಿದಿನ 15 ನಿಮಿಷಗಳ ಕಾಲ ತಮ್ಮ ವೈದ್ಯರೊಂದಿಗೆ ಸಮಾಲೋಚನೆ ಮತ್ತು ಜೈಲಿನಲ್ಲಿ ಇನ್ಸುಲಿನ್ ನೀಡುವಂತೆ ಕೋರಿ ಕೇಜ್ರಿವಾಲ್ ಅವರು ಶುಕ್ರವಾರ ನ್ಯಾಯಲಯಕ್ಕೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT