ಮತದಾನ (ಸಾಂಕೇತಿಕ ಚಿತ್ರ) online desk
ದೇಶ

ಲೋಕಸಭಾ ಚುನಾವಣೆ 2024: 2ನೇ ಹಂತದ ಮತದಾನಕ್ಕೆ heat wave ಆತಂಕ; ಆಯೋಗಕ್ಕೆ IMD ಮಾಹಿತಿ

ಲೋಕಸಭಾ ಚುನಾವಣೆ 2024 ರ 2 ನೇ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ನಡುವೆ ದೇಶದ ಹಲವು ಭಾಗಗಳಲ್ಲಿ ಉಷ್ಣಾಂಶ ಏರುಗತಿಯಲ್ಲಿದ್ದು, heatwave ಆತಂಕ ಮೂಡಿದೆ.

ನವದೆಹಲಿ: ಲೋಕಸಭಾ ಚುನಾವಣೆ 2024 ರ 2 ನೇ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ನಡುವೆ ದೇಶದ ಹಲವು ಭಾಗಗಳಲ್ಲಿ ಉಷ್ಣಾಂಶ ಏರುಗತಿಯಲ್ಲಿದ್ದು, heatwave ಆತಂಕ ಮೂಡಿದೆ.

ಈ ಬಗ್ಗೆ ಹವಾಮಾನ ಇಲಾಖೆ (IMD) ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದು, ಏ.26 ರಂದು ನಡೆಯಲಿರುವ ಮತದಾನಕ್ಕೆ heatwave ನ ಆತಂಕ ಇಲ್ಲ ಎಂದು ಹೇಳಿದೆ.

2 ನೇ ಹಂತದಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಹವಾಮಾನ ಮುನ್ಸೂಚನೆಯು "ಸಾಮಾನ್ಯವಾಗಿರಲಿದೆ" ಎಂದು ಐಎಂಡಿ ಮಹಾನಿರ್ದೇಶಕ ಮೃತುಂಜಯ್ ಮೊಹಾಪಾತ್ರ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ.

ಹೆಚ್ಚುತ್ತಿರುವ ತಾಪಮಾನದ ಬಗ್ಗೆ ಕಳವಳದ ನಡುವೆ, ಹವಾಮಾನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮತ್ತು ಲೋಕಸಭೆ ಚುನಾವಣೆಯ ಅವಧಿಯಲ್ಲಿ ಬಿಸಿ ವಾತಾವರಣದ ಪರಿಸ್ಥಿತಿಗಳಿಂದ ಉಂಟಾಗುವ ಯಾವುದೇ ಅಪಾಯವನ್ನು ತಗ್ಗಿಸುವ ಕ್ರಮಗಳನ್ನು ಚರ್ಚಿಸಲು ಆಯೋಗ ಸೋಮವಾರ (ಏ.22) ರಂದು ಸಂಬಂಧಿಸಿದ ಏಜೆನ್ಸಿಗಳೊಂದಿಗೆ ಸಭೆ ನಡೆಸಿದೆ.

ಏ.19 ರಿಂದ ಜೂ.1 ವರೆಗೆ ದೇಶಾದ್ಯಂತ ವಿವಿಧ ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗ, ಐಎಂಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೇಂದ್ರ ಆರೋಗ್ಯ ಸಚಿವಾಲಯ)ದ ಅಧಿಕಾರಿಗಳು, ಪ್ರತಿ ಮತದಾನದ ಹಂತಕ್ಕೂ 5 ದಿನಗಳ ಮೊದಲು heatwave ನ ಪ್ರಭಾವವನ್ನು ಪರಿಶೀಲಿಸಿ, ಯಾವುದೇ ಆತಂಕಕಾರಿ ಬೆಳವಣಿಗೆಗಳಿದ್ದರೂ ಅದನ್ನು ನಿರ್ವಹಣೆ ಮಾಡಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT