CJI DY ಚಂದ್ರಚೂಡ್ PIT
ದೇಶ

ಕಾನೂನು ಪದವಿಯನ್ನು 5 ವರ್ಷದಿಂದ 3 ವರ್ಷಕ್ಕೆ ಪರಿವರ್ತಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ: ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೂರು ವರ್ಷಗಳ ಕೋರ್ಸ್ ಏಕೆ ... ವಿದ್ಯಾರ್ಥಿಗಳು ಪ್ರೌಢಶಾಲೆಯ ನಂತರವೇ ಕಾನೂನು ಅಭ್ಯಾಸವನ್ನು ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಗಿ ಟೀಕಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಐದು ವರ್ಷಗಳ LLB (ಬ್ಯಾಚುಲರ್ ಆಫ್ ಲಾ) ಕೋರ್ಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರೊಂದಿಗೆ ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ಹೇಳಿದೆ.

ಪಿಐಎಲ್ ಹಿಂಪಡೆಯಲು ಅನುಮತಿ ನೀಡಿದ ದ್ವಿಸದಸ್ಯ ಪೀಠವು, ನಮಗೆ ಈ ವೃತ್ತಿಗೆ ಪ್ರಬುದ್ಧರು ಬರಬೇಕಾಗಿದೆ. ಈ 5 ವರ್ಷಗಳ ಕೋರ್ಸ್ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಿದೆ. ವಕೀಲೆ-ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ವಾದ ಮಂಡಿಸಿದರು.

ಬ್ರಿಟನ್ ನಲ್ಲೇ ಕಾನೂನು ಕೋರ್ಸ್ ಮೂರು ವರ್ಷಗಳದ್ದಾಗಿದೆ. ಇಲ್ಲಿ ಪ್ರಸ್ತುತ ಇರುವ ಐದು ವರ್ಷಗಳ LLB ಕೋರ್ಸ್ 'ಬಡವರಿಗೆ, ವಿಶೇಷವಾಗಿ ಹುಡುಗಿಯರಿಗೆ ನಿರಾಶಾದಾಯಕವಾಗಿದೆ ಎಂದು ಹಿರಿಯ ವಕೀಲರು ವಾದಿಸಿದರು. ಈ ವಾದವನ್ನು ಸಿಜೆಐ ಒಪ್ಪಲಿಲ್ಲ. ಈ ಬಾರಿ 70 ಪ್ರತಿಶತ ಮಹಿಳೆಯರು ಜಿಲ್ಲಾ ನ್ಯಾಯಾಂಗಕ್ಕೆ ಪ್ರವೇಶಿಸಿದ್ದಾರೆ. ಈಗ ಹೆಚ್ಚಿನ ಹುಡುಗಿಯರು ಕಾನೂನು ಪದವಿ ಅಧ್ಯಯನಕ್ಕೆ ಮುಂದಾಗುತ್ತಿದ್ದಾರೆ ಎಂದು ಹೇಳಿದರು.

ಪ್ರಸ್ತುತ, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ಐದು ವರ್ಷಗಳ ಸಮಗ್ರ ಕಾನೂನು ಕೋರ್ಸ್ ಅನ್ನು ಮುಂದುವರಿಸಬಹುದು. ಇದಕ್ಕಾಗಿ ಅವರು ಪ್ರಮುಖ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು (NLU ಗಳು) ಅಳವಡಿಸಿಕೊಂಡ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯನ್ನು (CLAT) ಪಾಸ್ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆದ ನಂತರ ಮೂರು ವರ್ಷಗಳ ಎಲ್‌ಎಲ್‌ಬಿ ಕೋರ್ಸ್‌ಗಳನ್ನು ಸಹ ಮಾಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT