ನಾರಾಯಣ ರಾಣೆ 
ದೇಶ

ಮೋದಿಯನ್ನು ನಿಂದಿಸುವ ಯಾರೂ ಮನೆ ತಲುಪುವುದಿಲ್ಲ: ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ರಾಣೆ ಬೆದರಿಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರಾದರೂ ನಿಂದಿಸಿದರೆ ಅವರು ಮರಳಿ ಮನೆ ತಲುಪಲು ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಬೆದರಿಕೆ ಹಾಕಿದ್ದಾರೆ.

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರಾದರೂ ನಿಂದಿಸಿದರೆ ಅವರು ಮರಳಿ ಮನೆ ತಲುಪಲು ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಬೆದರಿಕೆ ಹಾಕಿದ್ದಾರೆ.

ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ-ಸಿಂಧುದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಣೆ ಅವರು ಸಿಂಧುದುರ್ಗ ಜಿಲ್ಲೆಯಲ್ಲಿ ಸೋಮವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.

ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪಕ್ಷದ ಸಂಸದ ಸಂಜಯ್ ರಾವತ್ ಅವರು ಏನು ಮಾತನಾಡುತ್ತಿದ್ದಾರೆಂದು ಅರ್ಥವಾಗದೆ ಮೋದಿಯನ್ನು ಟೀಕಿಸುತ್ತಾರೆ ಎಂದು ಶಿವಸೇನೆ ಮಾಜಿ ನಾಯಕರಾದ ರಾಣೆ ವಾಗ್ದಾಳಿ ನಡೆಸಿದರು.

"ವಿರೋಧ ಪಕ್ಷಗಳು ಶೀಘ್ರದಲ್ಲೇ ಸಿಂಧುದುರ್ಗದಲ್ಲಿ ರ್ಯಾಲಿ ನಡೆಸಲಿವೆ ಎಂದು ನನಗೆ ತಿಳಿದಿದೆ. ರ್ಯಾಲಿ ನಡೆಸಲಿ ಅದು ಪ್ರಜಾಪ್ರಭುತ್ವದ ಭಾಗವಾಗಿದೆ. ಆದರೆ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರಾದರೂ ಕೆಟ್ಟ ಭಾಷೆ ಬಳಸಿದರೆ, ಆ ವ್ಯಕ್ತಿಯನ್ನು ನಾವು ಇಲ್ಲಿಂದ ಮನೆಗೆ ಹೋಗಲು ಬಿಡುವುದಿಲ್ಲ" ಎಂದು ರಾಣೆ ಎಚ್ಚರಿಕೆ ನೀಡಿದರು.

2005 ರಲ್ಲಿ ಉದ್ಧವ್ ಠಾಕ್ರೆ ಅವರೊಂದಿಗೆ ಮುನಿಸಿಕೊಂಡ ನಂತರ ಶಿವಸೇನೆ ತೊರೆದ ಬಿಜೆಪಿ ನಾಯಕ ರಾಣೆ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಉದ್ಧವ್ ಠಾಕ್ರೆ ಅವರನ್ನು ಅವರ ತಂದೆ ಬಾಳ್ ಠಾಕ್ರೆ ಆಯ್ಕೆ ಮಾಡುತ್ತಿರಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!