ಸಾಂದರ್ಭಿಕ ಚಿತ್ರ 
ದೇಶ

42 ಕೋಟಿ ರೂ. ವ್ಯವಹಾರ: ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ

ಅಕ್ರಮ ವಹಿವಾಟು ನಡೆಸಲು ಸುಮಾರು 42 ಕೋಟಿ ರೂಪಾಯಿ ಸಂಗ್ರಹಿಸಿದ ಬಳ್ಳಾರಿ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ/ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಲಂಚ ನೀಡುವುದು ಸೇರಿದಂತೆ ಅಕ್ರಮ ವಹಿವಾಟು ನಡೆಸಲು ಸುಮಾರು 42 ಕೋಟಿ ರೂಪಾಯಿ ಸಂಗ್ರಹಿಸಿದ ಬಳ್ಳಾರಿ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 66(2)ರ ಅಡಿಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಜಾರಿ ನಿರ್ದೇಶನಾಲಯವು ಇದೇ ರೀತಿಯ ಪತ್ರವನ್ನು ಬರೆದಿದ್ದು, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ತಾನು ಸಂಗ್ರಹಿಸಿದ ಸಾಕ್ಷ್ಯವನ್ನು ಪರಿಶೀಲಿಸುವಂತೆ ಕೋರಿದೆ.

ಅಕ್ರಮ ಗಣಿಗಾರಿಕೆ ಮತ್ತು ಕೆಲವು ಭೂ ವ್ಯವಹಾರಗಳ ಆರೋಪಗಳಿಗೆ ಸಂಬಂಧಿಸಿ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ 2023ರ ಫೆಬ್ರವರಿ 10 ರಂದು ನಾರಾ ಭರತ್ ರೆಡ್ಡಿ ಹಾಗೂ ಅವರ ಆಪ್ತರ ಮನೆ, ಕಚೇರಿ ಮೇಲೆ ಇಡಿ ದಾಳಿ ನಡೆಸಿತ್ತು.

ದಾಳಿ ನಡೆದ ಮೂರು ದಿನಗಳ ನಂತರ, ಪತ್ರಿಕಾ ಪ್ರಕಟಣೆ ನೀಡಿದ್ದ ಇಡಿ, ದಾಳಿ ವೇಳೆ ಲೆಕ್ಕಕ್ಕೆ ಸಿಗದ 31 ಲಕ್ಷ ರೂಪಾಯಿ ನಗದು ಹಣ ಜೊತೆಗೆ ಮಹತ್ವದ ಸಾಕ್ಷ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಭರತ್ ರೆಡ್ಡಿ ಅವರು ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬರೋಬ್ಬರಿ 42 ಕೋಟಿ ರೂಪಾಯಿ ವ್ಯವಹಾರ ನಡೆಸಿರುವ ದಾಖಲೆ ಸಿಕ್ಕಿದೆ ಎಂದು ಹೇಳಿತ್ತು.

42.07 ಕೋಟಿ ರೂಪಾಯಿಯಲ್ಲಿ ಮತದಾರರಿಗೆ ನಗದು ವಿತರಣೆ ಮತ್ತು ಪಕ್ಷದ ಟಿಕೆಟ್‌ಗಾಗಿ ಹಣ ನೀಡಿರುವುದು ಸೇರಿದಂತೆ ಇತರ ಚುನಾವಣಾ ಸಂಬಂಧಿತ ವೆಚ್ಚಗಳು ಇದರಲ್ಲಿ ಸೇರಿವೆ ಎಂದು ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

34 ವರ್ಷದ ಕಾಂಗ್ರೆಸ್ ಶಾಸಕರು "ಚುನಾವಣಾ ಆಯೋಗಕ್ಕೆ ಚುನಾವಣಾ ಸಂಬಂಧಿತ ವೆಚ್ಚವನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಮತ್ತು ಚುನಾವಣೆಯ ಸಮಯದಲ್ಲಿ ಖರ್ಚು ಮಾಡಿದ ಗಣನೀಯ ಹಣದ ಮೂಲವನ್ನು ಲೆಕ್ಕ ಹಾಕಲು ವಿಫಲರಾಗಿದ್ದಾರೆ" ಎಂದು ಇಡಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಈ ಆಪಾದಿತ ಕ್ರಮಗಳು ಲಂಚ, ಭ್ರಷ್ಟಾಚಾರ ಮತ್ತು ಚುನಾವಣಾ ವೆಚ್ಚವನ್ನು ಬಹಿರಂಗಪಡಿಸುವಲ್ಲಿ ವಿಫಲತೆ ಸೇರಿದಂತೆ ಪ್ರಜಾಪ್ರತಿನಿಧಿ ಕಾಯಿದೆಯ "ಉಲ್ಲಂಘನೆ" ಎಂದು ಹೇಳುವ ಮೂಲಕ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಇಡಿ ಕೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT