ಕೇಜ್ರಿವಾಲ್-ಕವಿತಾ 
ದೇಶ

Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ಹೌದು.. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು BRS ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ.

ಉಭಯ ನಾಯಕರ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಸಿಬಿಐ ಮತ್ತು ಇಡಿ ವಿಷಯಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ವಾದ ಆಲಿಸಿದ ನ್ಯಾಯಾಧೀಶರು ಮೇ 7ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದರು.

ಅಂದಹಾಗೆ ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ತೆಲಂಗಾಣ ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಮತ್ತು ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?