ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ 'ಬಿರಿಯಾನಿ' ಬಡಿಸಿದ ಅಂಗಡಿ ಮಾಲೀಕನ ಬಂಧನ

ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಭಗವಾನ್ ರಾಮನ ಚಿತ್ರ ಇರುವ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.

ನವದೆಹಲಿ: ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಭಗವಾನ್ ರಾಮನ ಚಿತ್ರ ಇರುವ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಅಂಗಡಿಯ ಮಾಲೀಕ ಕಾರ್ಖಾನೆಯಿಂದ 1000 ಪ್ಲೇಟ್‌ಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳಲ್ಲಿ ನಾಲ್ಕು ಪ್ಲೇಟ್ ಗಳಲ್ಲಿ ಮಾತ್ರ ಭಗವಾನ್ ರಾಮನ ಚಿತ್ರ ಮುದ್ರಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಪ್ಲೇಟ್ ಗಳ ಮೇಲಿನ ಭಗವಾನ್ ರಾಮನ ಚಿತ್ರದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಮಾಲೀಕ ಹೇಳಿದ್ದಾರೆ. ಆ ಬಗ್ಗೆ ಕಾರ್ಖಾನೆಯ ಮಾಲೀಕರು ಪರಿಶೀಲಿಸಿದ್ದಾರೆ" ಎಂದು ಅಧಿಕಾರಿ ಹೇಳಿದರು.

ಶನಿವಾರ ಮಧ್ಯಾಹ್ನ ಭಗವಾನ್ ರಾಮನ ಚಿತ್ರವಿರುವ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ಜಹಾಂಗೀರ್‌ಪುರಿಯಿಂದ ಕರೆ ಮಾಡಿ ಮಾಹಿತಿ ನೀಡಲಾಗಿದೆ.

"ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿದಾಗ, ಅಲ್ಲಿ ಕೆಲವು ವ್ಯಕ್ತಿಗಳು ಅಂಗಡಿಯ ಹೊರಗೆ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿತು. ಈ ವಿಷಯದ ಬಗ್ಗೆ ಸೂಕ್ತ ತನಿಖೆಯ ಭರವಸೆ ನೀಡಿದ ನಂತರ ಅವರು ಪ್ರತಿಭಟನೆ ಕೈಬಿಟ್ಟರು" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಗಡಿಯ ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 107/151 ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ನಂತರ ಅವರನ್ನು ಬಿಟ್ಟು ಕಳುಹಿಸಲಾಗಿದೆ. ಪ್ಲೇಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT