ಇವಿಎಂ ಸಾಂದರ್ಭಿಕ ಚಿತ್ರ 
ದೇಶ

ಇವಿಎಂ-ವಿವಿಪ್ಯಾಟ್ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದಾಖಲಾಗಿರುವ ಮತಗಳನ್ನು ಸಂಪೂರ್ಣ ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನವದೆಹಲಿ: ಇವಿವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದಾಖಲಾಗಿರುವ ಮತಗಳನ್ನು ಸಂಪೂರ್ಣ ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆಗೆ ಸಂಬಂಧಿಸಿದ ಐದು ಪ್ರಶ್ನೆಗಳಿಗೆ ಚುನಾವಣಾ ಆಯೋಗದ ಅಧಿಕಾರಿಯಿಂದ ಉತ್ತರಗಳನ್ನು ಪಡೆದ ನಂತರ ತೀರ್ಪನ್ನು ಕಾಯ್ದಿರಿಸಿತು.

ಇವಿಎಂಗಳ ಕಾರ್ಯನಿರ್ವಹಣೆಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ಈ ಹಿಂದೆ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದ ಹಿರಿಯ ಉಪ ಚುನಾವಣಾ ಆಯುಕ್ತ ನಿತೇಶ್ ಕುಮಾರ್ ವ್ಯಾಸ್ ಅವರನ್ನು ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯಕ್ಕೆ ಪೀಠ ಕರೆಸಿತ್ತು. ಇವಿಎಂಗಳ ಬಗ್ಗೆ ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ನೀಡಿದ ಉತ್ತರಗಳಲ್ಲಿ ಕೆಲವು ಗೊಂದಲಗಳಿರುವುದರಿಂದ ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಪೀಠ ಹೇಳಿತ್ತು.

ಇವಿಎಂನಲ್ಲಿ ಮತಗಳ ಸಂಗ್ರಹ, ಇವಿಎಂ ಕಂಟ್ರೋಲಿಂಗ್ ಯೂನಿಟ್ ನ ಮೈಕ್ರೋ ಚಿಪ್ ಮತ್ತಿತರ ಅಂಶಗಳ ಕುರಿತಂತೆ ಚುನಾವಣಾ ಆಯೋಗದಿಂದ ನ್ಯಾಯಾಲಯ ಸ್ಪಷ್ಟನೆ ಕೇಳಿತ್ತು. ವಿವಿಪ್ಯಾಟ್ ಸ್ವತಂತ್ರ ಮತ ಪರಿಶೀಲನಾ ವ್ಯವಸ್ಥೆಯಾಗಿದ್ದು, ಮತದಾರರು ತಮ್ಮ ಮತಗಳನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಎಂದು ನೋಡಲು ಅನುವು ಮಾಡಿಕೊಡುತ್ತದೆ.

ಮತದಾರರ ಸಂತೃಪ್ತಿ ಮತ್ತು ಚುನಾವಣಾ ವ್ಯವಸ್ಥೆಯಲ್ಲಿ ನಂಬಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ನ್ಯಾಯಪೀಠ,. ಇವಿಎಂಗಳ ಪರಿಣಾಮಕಾರಿತ್ವವನ್ನು ಅನುಮಾನಿಸದಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಗೆ ಹಿಂತಿರುಗಲು ನಿರ್ದೇಶನವನ್ನು ಕೋರಿದ ಅರ್ಜಿದಾರರಿಗೆ ಚುನಾವಣಾ ಆಯೋಗ ಉತ್ತಮ ಕೆಲಸ ಮಾಡಿದರೆ ಪ್ರಶಂಸಿಸುವಂತೆ ಹೇಳಿತು.

ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ಬದಲಾಯಿಸಿ ಅಪಾರದರ್ಶಕ ಗಾಜು ಅಳವಡಿಸಿದ 2017ರ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಗೊಳಿಸುವಂತೆ ಅರ್ಜಿದಾರರಾದ ಎನ್‌ಜಿಒ 'ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್' (ಎಡಿಆರ್) ಪರ ವಕೀಲ ಪ್ರಶಾಂತ್ ಭೂಷಣ್ ಕೋರಿದ ಅರ್ಜಿಗೆ ನ್ಯಾಯಪೀಠ ಈ ಹೇಳಿಕೆ ನೀಡಿತು. ಬದಲಾದ ಗಾಜಿನ ಮೂಲಕ ಮತದಾರರು ಏಳು ಸೆಕೆಂಡುಗಳ ಕಾಲ ಲೈಟ್ ಆನ್ ಆಗಿರುವಾಗ ಮಾತ್ರ ಮತದಾನ ಮಾಡಿದ ಟಿಯನ್ನು ನೋಡಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT