ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಅಬಕಾರಿ ಹಗರಣದ ಕಿಂಗ್‌ಪಿನ್, ಕಿಕ್‌ಬ್ಯಾಕ್ ಗೆ ಬೇಡಿಕೆ: ಸುಪ್ರೀಂ ಕೋರ್ಟ್ ಗೆ ED

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ "ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ" ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ "ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ" ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

ದೆಹಲಿ ಸಿಎಂ ಬಂಧನಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ಗೆ 734 ಪುಟಗಳ ಅಫಿಡವಿಟ್‌ ಸಲ್ಲಿಸಿದ ಇಡಿ, "ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ಪರಿಕಲ್ಪನೆಯನ್ನು" ಎಂದಿಗೂ ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ.

ಕೇಜ್ರಿವಾಲ್ ಅವರು ತಮ್ಮ ಸಚಿವರು ಮತ್ತು ಎಎಪಿ ನಾಯಕರೊಂದಿಗೆ ಶಾಮೀಲಾಗಿ ಕೆಲಸ ಮಾಡಿದ್ದಾರೆ. ನೀತಿಯಲ್ಲಿ ನೀಡಲಾದ ಅನುಕೂಲಗಳಿಗೆ ಬದಲಾಗಿ ಮದ್ಯದ ಉದ್ಯಮಿಗಳಿಂದ "ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ" ಎಂದು ಜಾರಿ ನಿರ್ದೇಶನಾಲಯ ಅಫಿಡವಿಟ್ ನಲ್ಲಿ ಆರೋಪಿಸಿದೆ.

"ಅರವಿಂದ್ ಕೇಜ್ರಿವಾಲ್ ಅವರು ಕೆಲವು ವ್ಯಕ್ತಿಗಳಿಗೆ ಅನುಕೂಲವಾಗುವಂತೆ ರೂಪಿಸಿದ್ದ ಅಬಕಾರಿ ನೀತಿ 2021-22 ರ ಪಿತೂರಿಯ ಭಾಗಿಯಾಗಿದ್ದಾರೆ ಮತ್ತು ಈ ನೀತಿಯಲ್ಲಿ ಮದ್ಯದ ಉದ್ಯಮಿಗಳಿಂದ ಪಡೆದ ಕಿಕ್‌ಬ್ಯಾಕ್‌ನಲ್ಲಿ ಭಾಗಿಯಾಗಿದ್ದಾರೆ" ಎಂದು ಇಡಿ ಹೇಳಿದೆ.

PMLA, 2002ರ ಕಾಯ್ದೆಯಲ್ಲಿ ಮುಖ್ಯಮಂತ್ರಿ ಮತ್ತು ಸಾಮಾನ್ಯ ನಾಗರಿಕರನ್ನು ಬಂಧಿಸಲು ಬೇರೆ ಬೇರೆ ಮಾನದಂಡಗಳು ಇಲ್ಲ. ಲಭ್ಯವಿರುವ ಸಾಕ್ಷ್ಯಾಧಾರಗಳು ಸಾಮಾನ್ಯ ನಾಗರಿಕರಂತೆ ಮುಖ್ಯಮಂತ್ರಿಯನ್ನು ಬಂಧಿಸಬಹುದು. ಆರೋಪಿ ಕೇಜ್ರಿವಾಲ್ ಅವರು ತಮ್ಮ ಸ್ಥಾನವನ್ನು ಒತ್ತಿಹೇಳುವ ಮೂಲಕ ತನಗಾಗಿ ವಿಶೇಷ ವರ್ಗವನ್ನು ರೂಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಇಡಿ ಹೇಳಿದೆ.

ತಮ್ಮ ಬಂಧನವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಮೂಲ ರಚನೆ ಮತ್ತು ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಎಂಬ ಕೇಜ್ರಿವಾಲ್ ವಾದವನ್ನು ತಳ್ಳಿಹಾಕಿದ ತನಿಖಾ ಸಂಸ್ಥೆ, "ಒಬ್ಬ ವ್ಯಕ್ತಿ ಎಷ್ಟೇ ಎತ್ತರದಲ್ಲಿದ್ದರೂ, ಅಪರಾಧದ ಸಾಕ್ಷ್ಯಗಳ ಆಧಾರದ ಮೇಲೆ ಬಂಧಿಸುವುದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಪರಿಕಲ್ಪನೆಯನ್ನು ಎಂದಿಗೂ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

SCROLL FOR NEXT