ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಬಂಧನ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ತ್ವರಿತ ವಿಚಾರಣೆಗೆ ಕೇಜ್ರಿವಾಲ್ ಮನವಿ

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಏ.29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ತಿಳಿಸಿದ್ದರೂ ಈಗ ಮೇ.06 ರಂದು ವಿಚಾರಣೆಗೆ ಪಟ್ಟಿ ಮಾಡಿದೆ ಎಂದು ವಕೀಲರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಸಿಂಘ್ವಿ ಮನವಿಗೆ ಪ್ರತಿಕ್ರಿಯೆ ನೀಡಿರುವ ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠ, ಇ-ಮೇಲ್ ಕಳಿಸಿ ಅದನ್ನು ಪರಿಗಣಿಸುತ್ತೇವೆ ಎಂದು ಹೇಳಿದೆ.

ಏಪ್ರಿಲ್ 9 ರಂದು ದೆಹಲಿ ಹೈಕೋರ್ಟ್ ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಒಂದು ದಿನದ ನಂತರ, ಕೇಜ್ರಿವಾಲ್ ಏಪ್ರಿಲ್ 10 ರಂದು ದೆಹಲಿ ಮದ್ಯ ಹಗರಣದಲ್ಲಿ ತನ್ನ ಬಂಧನ ಮತ್ತು ರಿಮಾಂಡ್ ಅರ್ಜಿಯನ್ನು ವಜಾಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಂಧನ ಮತ್ತು ಬಂಧನದ ನಿರಾಕರಣೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿದ ಮೇಲ್ಮನವಿಯು ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆಗೆ ಬಾಕಿ ಉಳಿದಿತ್ತು.

ದೆಹಲಿ ಮದ್ಯ ಹಗರಣ ಪ್ರಕರಣದ ತನಿಖಾ ಸಂಸ್ಥೆಯಾಗಿರುವ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ಸಲ್ಲಿಸಿದ್ದು, 9 ಸಮನ್ಸ್ ಜಾರಿಯಿಂದ ತಪ್ಪಿಸಿಕೊಳ್ಳುವ ಮೂಲಕ ಕೇಜ್ರಿವಾಲ್ ತನ್ನನ್ನು ಉಳಿಸಿಕೊಳ್ಳಲು ಹತಾಶವಾಗಿ ಪ್ರಯತ್ನಿಸಿದ್ದಾರೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT