ಪ್ರಜ್ಞಾ ಸಿಂಗ್ ಠಾಕೂರ್  
ದೇಶ

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಪ್ರಜ್ಞಾ ಠಾಕೂರ್ ನ್ಯಾಯಾಲಯಕ್ಕೆ ಹಾಜರು!

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಿದ್ದಾರೆ.

ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಿದ್ದಾರೆ.

ಈ ಹಿಂದೆ ಹಲವು ಸಂದರ್ಭಗಳಲ್ಲಿ ಅನಾರೋಗ್ಯದ ನೆಪವೊಡ್ಡಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರಿಂದ ವಿಶೇಷ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಏಪ್ರಿಲ್ 25 ರಂದು ಠಾಕೂರ್ ಹಾಜರಾಗಲು ವಿಫಲವಾದರೆ, ನಂತರ ಕ್ರಮ ಎದುರಿಸಬೇಕಾಗುತ್ತದೆ ಎಂದು ಹೇಳಿತ್ತು.

ಗುರುವಾರ ತನಿಖೆ ನಡೆಸಿದ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು, ಆದರೆ ಅವರು ಇನ್ನೂ ಅನಾರೋಗ್ಯದಿಂದ ಇರುವುದಾಗಿ ಅವರು ಹೇಳಿದ್ದಾರೆ. ಠಾಕೂರ್ ತನ್ನ ಹೇಳಿಕೆಯನ್ನು ಪ್ರಶ್ನೋತ್ತರ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ಹಠಾತ್ ಅಂಗೈಯಲ್ಲಿ ಶಕ್ತಿ ಕಳೆದುಕೊಂಡಿದ್ದರಿಂದ ಕಾಗದಕ್ಕೆ ಸಹಿ ಹಾಕಲು ಸಾಧ್ಯವಾಗದ ಕಾರಣ ಹೇಳಿಕೆಯ ಮೇಲೆ ಹೆಬ್ಬೆರಳಿನ ಗುರುತನ್ನು ಹಾಕಲು ಅನುಮತಿ ಕೋರಿ ಅರ್ಜಿಯನ್ನೂ ಸಲ್ಲಿಸಿದರು. ನ್ಯಾಯಾಲಯ ಅದಕ್ಕೆ ಅನುಮತಿ ನೀಡಿತು.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯಿದೆ, ಭಾರತೀಯ ಶಸ್ತ್ರಾಸ್ತ್ರ ಕಾಯಿದೆ ಮತ್ತು ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಠಾಕೂರ್ ಜೊತೆಗೆ ಇತರ ಆರು ಮಂದಿ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ನ್ಯಾಯಾಲಯ ಪ್ರಸ್ತುತ ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 313 ರ ಅಡಿಯಲ್ಲಿ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ.

ಸೆಪ್ಟೆಂಬರ್ 29, 2008 ರಂದು ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಾಸಿಕ ಜಿಲ್ಲೆಯ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಕಟ್ಟಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಾಗ ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಕಳೆದ ತಿಂಗಳು, ನ್ಯಾಯಾಲಯ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಠಾಕೂರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ನಂತರ ಆಕೆ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾದ್ದರಿಂದ ವಾರಂಟ್ ರದ್ದುಗೊಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT