ವೈಎಸ್ ಜಗನ್ ಮೋಹನ್ ರೆಡ್ಡಿ 
ದೇಶ

ಆಂಧ್ರ ಚುನಾವಣೆ: ವೈಎಸ್‌ಆರ್‌ಸಿಪಿ ಪ್ರಣಾಳಿಕೆ ಬಿಡುಗಡೆ; ಪಿಂಚಣಿ ಹೆಚ್ಚಳ, ವೈಜಾಗ್ ಆಡಳಿತ ರಾಜಧಾನಿ ಸೇರಿ ಹಲವು ಭರವಸೆ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.

ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು ಮತ್ತು ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಜಾರಿಗೊಳಿಸುವುದಾಗಿ ಪ್ರತಿಪಾದಿಸಿದರು.

ಇಂದು ಸಿಎಂ ಕ್ಯಾಂಪ್ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಜಗನ್, ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಾಯೋಗಿಕ ವಿಷಯಗಳು ಮಾತ್ರ ಇವೆ ಎಂದು ಹೇಳಿದರು.

“ಸುಳ್ಳು ಹಬ್ಬಿಸುವಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಸ್ಪರ್ಧಿಸಲು ನಾನು ಬಯಸುವುದಿಲ್ಲ. ಜಾರಿಗೊಳಿಸಬಹುದಾದ ಭರವಸೆಗಳನ್ನು ಮಾತ್ರ ನೀಡುತ್ತೇನೆ. 2019 ರಲ್ಲಿ, ನಾವು ನವರತ್ನಗಳು ಕಾರ್ಯಕ್ರಮಗಳ ಭರವಸೆ ನೀಡಿದ್ದೇವೆ ಮತ್ತು ಅದರಲ್ಲಿ ಶೇ. 99.4 ರಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ” ಎಂದು ಅವರು ವಿವರಿಸಿದರು.

ಕಳೆದ 58 ತಿಂಗಳಲ್ಲಿ ಎಲ್ಲಾ ಭರವಸೆಗನ್ನು ಅನುಷ್ಠಾನಗೊಳಿಸಿದ್ದೇವೆ. ಹಿಂದಿನ ಟಿಡಿಪಿ ಮೈತ್ರಿಕೂಟದ ಪ್ರಣಾಳಿಕೆಯೊಂದಿಗೆ(2014) ಹೋಲಿಸಿದರೆ, ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಾರು ಪ್ರಾಮಾಣಿಕರು ಎಂಬ ಸತ್ಯವನ್ನು ಅಂಕಿಅಂಶಗಳೇ ಹೇಳುತ್ತಿವೆ ಎಂದು ಜಗನ್ ಹೇಳಿದರು.

ಕಳೆದ 58 ತಿಂಗಳುಗಳಲ್ಲಿ ಜಾರಿಗೆ ತಂದ ಪ್ರತಿಯೊಂದು ಯೋಜನೆಯನ್ನು ಮುಂದುವರಿಸಲಾಗುವುದು ಎಂದ ಆಂಧ್ರ ಸಿಎಂ, ಸಮಾಜ ಕಲ್ಯಾಣ ಪಿಂಚಣಿಯನ್ನು ಈಗಿರುವ 3,000 ರೂ.ಗಳಿಂದ 3,500 ರೂ.ಗೆ ಹೆಚ್ಚಿಸಲಾಗುವುದು ಎಂದರು.

ಇನ್ನು ರಾಜಧಾನಿ ವಿಚಾರಕ್ಕೆ ಸಂಬಂಧಿಸಿದಂತೆ, ಚುನಾವಣೆಯ ನಂತರ ತಮ್ಮ ಸರ್ಕಾರ ರಚನೆಯಾದರೆ, ವಿಶಾಖಪಟ್ಟಣಂ ಕಾರ್ಯಕಾರಿ ರಾಜಧಾನಿಯಾಗಲಿದೆ ಮತ್ತು ಅಲ್ಲಿಂದಲೇ ಆಡಳಿತ ನಡೆಸಲಾಗುವುದು ಎಂದು ಜಗನ್ ಸ್ಪಷ್ಟಪಡಿಸಿದ್ದಾರೆ.

“ವಿಶಾಖಪಟ್ಟಣಂ ಅನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲಾಗುವುದು. ಅಮರಾವತಿಯನ್ನು ಶಾಸಕಾಂಗ ರಾಜಧಾನಿಯಾಗಿ ಮತ್ತು ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯಾಗಿ ಅಭಿವೃದ್ಧಿಪಡಿಸಲಾಗುವುದು ” ಎಂದು ಜಗನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT