ದೇಶ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ಜೈ ಶ್ರೀರಾಮ್ ಘೋಷಣೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು!

ಉತ್ತರ ಪ್ರದೇಶದ ಜೌನ್ ಪುರ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀರಾಮ್ ಘೋಷಣೆ, ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದು ಉತ್ತೀರ್ಣರಾಗಿದ್ದಾರೆ.

ಉತ್ತರ ಪ್ರದೇಶದ ಜೌನ್ ಪುರ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀರಾಮ್ ಘೋಷಣೆ, ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದು ಉತ್ತೀರ್ಣರಾಗಿದ್ದಾರೆ.

ಆರ್ ಟಿಐ ನಲ್ಲಿ ಈ ಮಾಹಿತಿ ಬಹಿರಂಗವಾಗಿದ್ದು, ಈ ರೀತಿ ಬರೆದ ನಾಲ್ವರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ನಾಲ್ವರು ಪ್ರೊಫೆಸರ್ ಗಳನ್ನು ಅಮಾನತುಗೊಳಿಸಲಾಗಿದೆ.

ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿವಿಯ ಉಪಕುಲಪತಿ ಡಾ. ವಂದನಾ ಸಿಂಗ್ ಮಾತನಾಡಿ ಈ ವಿಷಯವಾಗಿ ಸಭೆಯನ್ನು ಕರೆಯಲಾಗಿತ್ತು. ಇಬ್ಬರು ಪ್ರಾಧ್ಯಾಪಕರಾದ ಡಾ. ಅಶುತೋಷ್ ಗುಪ್ತಾ ಹಾಗೂ ಡಾ. ವಿನಯ್ ವರ್ಮಾ ತಪ್ಪು ಮೌಲ್ಯಮಾಪನ ಮಾಡಿದ್ದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲು ಶಿಸ್ತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ಅದನ್ನು ಕಾರ್ಯಕಾರಿ ಮಂಡಳಿಯ ಮುಂದೆ ಮಂಡಿಸಲಾಗುವುದು ಎಂದು ಡಾ. ವಂದನಾ ಸಿಂಗ್ ತಿಳಿಸಿದ್ದಾರೆ. ನಾಲ್ವರು ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಪ್ರಾಧ್ಯಾಪಕರು ಸುಲಿಗೆ ಮಾಡಿದ ಆರೋಪದ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT