ಮೋಹನ್ ಭಾಗವತ್ 
ದೇಶ

Reservations ಚರ್ಚೆಗಳ ನಡುವೆಯೇ ಮೀಸಲಾತಿ ಬೆಂಬಲಿಸಿದ RSS ಮುಖ್ಯಸ್ಥ Mohan Bhagwat!

ದೇಶದಲ್ಲಿನ ಮೀಸಲಾತಿ ಕುರಿತು ಪರ-ವಿರೋಧ ಚರ್ಚೆಗಳ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿಯನ್ನು ಬೆಂಬಲಿಸಿದ್ದಾರೆ.

ಹೈದರಾಬಾದ್: ದೇಶದಲ್ಲಿನ ಮೀಸಲಾತಿ ಕುರಿತು ಪರ-ವಿರೋಧ ಚರ್ಚೆಗಳ ನಡುವೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿಯನ್ನು ಬೆಂಬಲಿಸಿದ್ದಾರೆ.

ಕರ್ನಾಟಕದಲ್ಲಿ ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರಾಜ್ಯ ಸರ್ಕಾರವು ಮುಸ್ಲಿಮರಿಗೆ ನೀಡಿರುವುದು ದೇಶ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇದರ ನಡುವೆಯೇ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರ ಪಿತ್ರಾರ್ಜಿತ ಆಸ್ತಿ ತೆರಿಗೆ ಭಾರಿ ವಿವಾದಕ್ಕೆ ಕಾರಣವಾಗಿರುವಂತೆಯೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೀಸಲಾತಿಯನ್ನು ಬೆಂಬಲಿಸಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಾಗವತ್, 'ಸಂಘ ಪರಿವಾರವು ಕೆಲವು ಗುಂಪುಗಳಿಗೆ ವಿಸ್ತರಿಸಿರುವ ಮೀಸಲಾತಿಯನ್ನು ಎಂದಿಗೂ ವಿರೋಧಿಸಲಿಲ್ಲ. ಮೀಸಲಾತಿಗಳನ್ನು ಎಲ್ಲಿಯವರೆಗೆ ಅಗತ್ಯವಿದೆಯೋ ಅಲ್ಲಿಯವರೆಗೆ ವಿಸ್ತರಿಸಬೇಕು ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ ಕುರಿತು ಜನರಿಗೆ ತಪ್ಪು ಕಲ್ಪನೆಗಳಿವೆ. ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ. ಆದರೆ, ಹೊರಗಡೆ ಆ ಕುರಿತು ಹೇಳುವುದಿಲ್ಲ ಅಷ್ಟೆ ಎಂಬಂತೆ ಬಿಂಬಿಸಲಾಗುತ್ತಿದೆ. ಸಾಂವಿಧಾನಿಕವಾಗಿ ನೀಡಲಾಗಿರುವ ಮೀಸಲಾತಿಯನ್ನು ನಾವು ಬೆಂಬಲಿಸುತ್ತೇವೆ. ಇದರಿಂದ ಸಮುದಾಯಗಳಿಗೆ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಹಾಗಾಗಿ, ಯಾರೂ ಆರ್‌ಎಸ್‌ಎಸ್‌ ಕುರಿತು ತಪ್ಪು ಮಾಹಿತಿಯನ್ನು ಹರಡಬಾರದು” ಎಂಬುದಾಗಿ ಮೋಹನ್‌ ಭಾಗವತ್‌ ಮನವಿ ಮಾಡಿದರು.

ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಕಳೆದ ವರ್ಷ ನಾಗ್ಪುರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಅಗೋಚರವಾಗಿದ್ದರೂ ತಾರತಮ್ಯವಿದೆ. ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT