ನಟ ಸಾಹಿಲ್ ಖಾನ್ 
ದೇಶ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸಗಢದಲ್ಲಿ ನಟ ಸಾಹಿಲ್ ಖಾನ್ ಬಂಧಿಸಿದ ಎಸ್‌ಐಟಿ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ಮುಂಬೈ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಶನಿವಾರ ಛತ್ತೀಸ್‌ಗಢದ ಜಗದಲ್‌ಪುರದಿಂದ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ಮುಂಬೈನಲ್ಲಿ ವಿಚಾರಣೆಗೆ ಒಳಗಾದ ನಂತರ ನಟ ಸಾಹಿಲ್ ಖಾನ್ ಮುಂಬೈ ಪೊಲೀಸ್ ಪ್ರಧಾನ ಕಚೇರಿಯನ್ನು ತೊರೆದರು.

ರಾಜ್ಯದ ಕೆಲವು ಹಣಕಾಸು ಮತ್ತು ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ವಿವಾದಿತ ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ನಡುವಿನ ಹಣ ಅಕ್ರಮ ವಹಿವಾಟಿನ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಾಹಿಲ್ ಖಾನ್ ಸೇರಿದಂತೆ ಇತರ 31 ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ.

15 ಕೋಟಿ ಸಾವಿರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಆ್ಯಪ್‌ ಪ್ರಕರಣದಲ್ಲಿ ಇಲ್ಲಿಯವರೆಗೆ ಒಬ್ಬನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯು ಆರೋಪಿಗಳ ಬ್ಯಾಂಕ್ ಖಾತೆಗಳು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಎಲ್ಲ ತಾಂತ್ರಿಕ ಸಾಧನಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಸ್ಟೈಲ್', 'ಎಕ್ಸ್‌ಕ್ಯೂಸ್ ಮಿ' ಚಿತ್ರಗಳಿಗೆ ಹೆಸರಾದ ಸಾಹಿಲ್ ಖಾನ್ ಫಿಟ್‌ನೆಸ್ ಎಕ್ಸ್‌ಪರ್ಟ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT