ಡ್ರಗ್ಸ್ ಸಹಿತ ಪಾಕ್ ದೋಣಿ ವಶಕ್ಕೆ 
ದೇಶ

Pakistan boat seized in Gujarat coast: 600 ಕೋಟಿ ರೂ ಮೌಲ್ಯದ ಡ್ರಗ್ಸ್ ಸಹಿತ ಪಾಕ್ ದೋಣಿ ವಶಕ್ಕೆ, 14 ಮಂದಿ ಬಂಧನ

ಭಾರತೀಯ ಕರಾವಳಿ ಭದ್ರತಾ ಪಡೆಗಳು ಭಾನುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 600 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನ ಮೂಲದ ಬೋಟ್ ಅನ್ನು ಸೀಜ್ ಮಾಡಿ 14 ಜನರನ್ನು ಬಂಧಿಸಿದೆ.

ಅಹ್ಮದಾಬಾದ್: ಭಾರತೀಯ ಕರಾವಳಿ ಭದ್ರತಾ ಪಡೆಗಳು ಭಾನುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 600 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನ ಮೂಲದ ಬೋಟ್ ಅನ್ನು ಸೀಜ್ ಮಾಡಿ 14 ಜನರನ್ನು ಬಂಧಿಸಿದೆ.

ಗುಜರಾತ್ ನ ಕರಾವಳಿಯಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಮನ್ವಯದಲ್ಲಿ ಅರಬ್ಬಿ ಸಮುದ್ರದಲ್ಲಿ ತಡರಾತ್ರಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಪಾಕಿಸ್ತಾನದ ಬೋಟ್ ನಿಂದ 600 ಕೋಟಿ ರೂಪಾಯಿ ಮೌಲ್ಯದ 86 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ, ಅಲ್ಲದೆ ಗುಜರಾತ್ ಕರಾವಳಿಯಲ್ಲಿ ಹಡಗಿನಲ್ಲಿದ್ದ 14 ಜನರನ್ನು ಬಂಧಿಸಲಾಗಿದೆ ಎಂದು ಕರಾವಳಿ ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ 28 ಎಪ್ರಿಲ್ 24 ರಂದು ಸಮುದ್ರದಲ್ಲಿ ಗುಪ್ತಚರ-ಆಧಾರಿತ ಮಾದಕವಸ್ತು ವಿರೋಧಿ ಕಾರ್ಯಾಚರಣೆಯನ್ನು ಕೈಗೊಂಡಿತು. ಈ ವೇಳೆ 600 ಕೋಟಿ ಮೌಲ್ಯದ ಸುಮಾರು 86 ಕೆಜಿ ಮಾದಕ ವಸ್ತುವನ್ನು ಪಾಕಿಸ್ತಾನದ ಬೋಟ್ ನಿಂದ ವಶಪಡಿಸಿಕೊಳ್ಳಲಾಗಿದೆ ಮತ್ತು 14 ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನದ ದೋಣಿಯಿಂದ ಯಾವ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದನ್ನು ಕೋಸ್ಟ್ ಗಾರ್ಡ್ ಇನ್ನೂ ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT