ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅನೇಕ ಎಸ್ ಪಿ ನಾಯಕರು ಬಿಜೆಪಿ ಸೇರ್ಪಡೆ, ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹಿನ್ನಡೆ

ಲೋಕಸಭೆ ಚುನಾವಣೆಯ ನಡುವೆ ಉತ್ತರ ಪ್ರದೇಶದಲ್ಲಿ ಅನೇಕ ಸಮಾಜವಾದಿ ಪಕ್ಷದ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.

ಲಖನೌ: ಲೋಕಸಭೆ ಚುನಾವಣೆಯ ನಡುವೆ ಉತ್ತರ ಪ್ರದೇಶದಲ್ಲಿ ಅನೇಕ ಸಮಾಜವಾದಿ ಪಕ್ಷದ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಲಖನೌ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಜೈ ಚೌಬೆ ಮತ್ತು ಬಲರಾಮ್ ಯಾದವ್ ಮತ್ತು ಜಗತ್ ಜೈಸ್ವಾಲ್ ಸೇರಿದಂತೆ ಹಲವಾರು ನಾಯಕರು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಇದರಿಂದಾಗಿ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪಾಠಕ್, ಮಾಜಿ ಶಾಸಕರು ಮತ್ತು ಹಲವಾರು ಜಿಲ್ಲಾಧ್ಯಕ್ಷರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬ್ಲಾಕ್ ಮಟ್ಟದಲ್ಲಿ ಕೆಲಸ ಮಾಡುವವರೂ ಅವರೊಂದಿಗೆ ಬರುತ್ತಿದ್ದಾರೆ, ಅವರ ಕೈಯಲ್ಲಿ ದೊಡ್ಡ ಜವಾಬ್ದಾರಿ ಇದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಜನಸಾಮಾನ್ಯರನ್ನು ತಲುಪಿದೆ. ಅವರ ಮಾರ್ಗದರ್ಶನದಲ್ಲಿ ನಾವು 'ವಿಕಸಿತ ಭಾರತ' ಸಂಕಲ್ಪವನ್ನು ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.

ಸಂಸತ್ತಿಗೆ ಗರಿಷ್ಠ ಸಂಖ್ಯೆಯ 80 ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶದಲ್ಲಿ ಎಲ್ಲಾ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಎಂಟು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆದಿದ್ದು, ಇತರ ಎಂಟು ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT