ಜೈರಾಮ್ ರಮೇಶ್ 
ದೇಶ

ಕಾಂಗ್ರೆಸ್ ನ್ಯಾಯ ಪತ್ರದ ಬಗ್ಗೆ ಮಾತನಾಡಲು ಪ್ರಧಾನಿಗೆ ಗೊಬೆಲ್ಸ್ ಸ್ಫೂರ್ತಿ: ಜೈರಾಮ್ ರಮೇಶ್

ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ ಪತ್ರ’ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಲು ನಾಜಿ ಪ್ರಚಾರಕ ಜೋಸೆಫ್ ಗೋಬೆಲ್ಸ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ಲೇವಡಿ ಮಾಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ ಪತ್ರ’ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಲು ನಾಜಿ ಪ್ರಚಾರಕ ಜೋಸೆಫ್ ಗೋಬೆಲ್ಸ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಲೇವಡಿ ಮಾಡಿದ್ದಾರೆ.

ಎನ್‌ಟಾಯರ್‌ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಎಂಎ ಮಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೋಬೆಲ್ಸ್‌ ಅವರ ಬಗ್ಗೆ ಓದಿ ಸ್ಪೂರ್ತಿ ಪಡೆದುಕೊಂಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ದೊಡ್ಡ ಸುಳ್ಳೊಂದು ಹೇಳಿ ಅದೇ ಸುಳ್ಳನ್ನು ಮತ್ತೆ ಮತ್ತೆ ಹೇಳಿದರೆ ಜನ ಅದನ್ನು ನಂಬುತ್ತಾರೆ ಎಂಬ ಗೋಬೆಲ್ಸ್‌ನ ಮಾತನ್ನು ಇಲ್ಲಿ ಉಲ್ಲೇಖಸಿದ್ದಾರೆ.

ಇತ್ತೀಚೆಗೆ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ನಿರ್ಲಜ್ಜವಾಗಿ, ನಾಚಿಕೆಯಿಲ್ಲದೆ ಸುಳ್ಳು ಹೇಳಿದ್ದಾರೆ. ಇದು 'ಅಸತ್ಯಮೇವ ಜಯತೇ' ಪ್ರಧಾನಿಯ ಧ್ಯೇಯವೆಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಅವರು ಮಾತನಾಡುವಾಗಲೆಲ್ಲಾ ಸತ್ಯವನ್ನು ಕೊಲ್ಲುತ್ತಾರೆ ಎಂದು ರಮೇಶ್‌ ಕಿಡಿಕಾರಿದ್ದಾರೆ. ಹಿಟ್ಲರ್ ಆಡಳಿತದಲ್ಲಿ ಗೋಬೆಲ್ಸ್‌ ಪ್ರಚಾರ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

'Happy Birthday... Please Resign'; ಧರ್ಮೇಂದ್ರ ಪ್ರಧಾನ್‌ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Party