ಏಕನಾಥ್ ಶಿಂಧೆ - ಸುರೇಶ್ ನವಲೆ 
ದೇಶ

ಶಿಂಧೆ ಶಿವಸೇನೆಗೆ ತೀವ್ರ ಹಿನ್ನಡೆ: ಮಾಜಿ ಸಚಿವ ಸುರೇಶ್ ನವಲೆ ರಾಜೀನಾಮೆ, ಎನ್‌ಸಿಪಿ(ಎಸ್‌ಪಿ) ಅಭ್ಯರ್ಥಿಗೆ ಬೆಂಬಲ

ಬಿಜೆಪಿಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಣಿದಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಸುರೇಶ್ ನವಲೆ ಅವರು ಶಿಂಧೆ ನೇತೃತ್ವದ ಶಿವಸೇನೆಗೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಬಿಜೆಪಿಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಣಿದಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಸುರೇಶ್ ನವಲೆ ಅವರು ಶಿಂಧೆ ನೇತೃತ್ವದ ಶಿವಸೇನೆಗೆ ರಾಜೀನಾಮೆ ನೀಡಿದ್ದಾರೆ.

ನವಲೆ ಅವರು ತಾವು ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ(ಎಸ್‌ಪಿ) ಬೀಡ್ ಅಭ್ಯರ್ಥಿ ಬಜರಂಗ್ ಸೋನಾವಾನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಸೋಮವಾರ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಬೀಡ್ ಮೂಲದ ಸುರೇಶ್ ನವಲೆ ಅವರು, ಏಪ್ರಿಲ್ 25 ರಂದೇ ತಾವು ಶಿವಸೇನೆಗೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

“ಮುಖ್ಯಮಂತ್ರಿಯು ಬಿಜೆಪಿಯ ಒತ್ತಡಕ್ಕೆ ಮಣಿದಿದ್ದಾರೆ ಎಂಬುದು ನನ್ನ ಆರೋಪ. ಅವರು ಹಿಂದೆ ಶಿವಸೇನಾ ವಿರುದ್ಧ ಬಂಡಾಯವೆದ್ದು ಸರ್ಕಾರ ರಚಿಸಿದರು. ಆದರೆ ಅದೇ ಉತ್ಸಾಹದಲ್ಲಿ ಬಿಜೆಪಿಯ ಒತ್ತಡವನ್ನು ವಿರೋಧಿಸಲಿಲ್ಲ ಎಂದು ನವಲೆ ಆರೋಪಿಸಿದ್ದಾರೆ.

2019 ರಲ್ಲಿ, ಅಂದಿನ ಅವಿಭಜಿತ ಶಿವಸೇನೆ ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ 22 ರಲ್ಲಿ ಸ್ಪರ್ಧಿಸಿ 18 ರಲ್ಲಿ ಜಯಗಳಿಸಿತು.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ) ಈ ಬಾರಿ ರಾಜ್ಯದಲ್ಲಿ 21 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಆದರೆ ಶಿಂಧೆ ನೇತೃತ್ವದ ಶಿವಸೇನೆ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುತ್ತಿದೆ ಎಂದು ನವಲೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT