ಸಾಂದರ್ಭಿಕ ಚಿತ್ರ  
ದೇಶ

ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿ ಕಾರ್ಯಾಚರಣೆ, ಏಳು ನಕ್ಸಲೀಯರ ಹತ್ಯೆ

ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಎಕೆ-47 ರೈಫಲ್, ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಭಾಗದ ಅರಣ್ಯದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 15 ದಿನಗಳಲ್ಲಿ ಭದ್ರತಾ ಪಡೆಗಳು ನಕ್ಸಲೀಯರ ಮೇಲೆ ನಡೆಸಿದ ಎರಡನೇ ಪ್ರಮುಖ ದಾಳಿ ಇದಾಗಿದೆ. ನಕ್ಸಲೀಯರ ಭದ್ರಕೋಟೆ ಎಂದು ಪರಿಗಣಿಸಲಾದ ಅಬುಜ್ಮದ್ ಪ್ರದೇಶದ ಟೆಕ್ಮೆಟಾ ಮತ್ತು ಕಾಕೂರ್ ಗ್ರಾಮಗಳ ನಡುವಿನ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆಗೆ ಹೊತ್ತಿಗೆ ಜಿಲ್ಲಾ ಮೀಸಲು ಗಾರ್ಡ್ (DRG) ಮತ್ತು ವಿಶೇಷ ಕಾರ್ಯಪಡೆ (STF) ಜಂಟಿ ತಂಡವು ಹೊರಹೋಗಿದ್ದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆಯಿತು. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಮಹಿಳೆಯರು ಸೇರಿದಂತೆ ಏಳು ನಕ್ಸಲೀಯರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಎಕೆ-47 ರೈಫಲ್, ಇತರ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಹತ್ಯೆಯಾದ ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯೊಂದಿಗೆ, ನಾರಾಯಣಪುರ ಮತ್ತು ಕಂಕೇರ್ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 88 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 16 ರಂದು ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 29 ನಕ್ಸಲೀಯರನ್ನು ಹೊಡೆದುರುಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT