ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್, ಅಮಿತ್ ಶಾ 
ದೇಶ

ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಸೇರಿದಂತೆ ನಾಲ್ವರು ರಾಜ್ಯಪಾಲರೊಂದಿಗೆ ಅಮಿತ್ ಶಾ ಮಾತುಕತೆ

ಮೈಸೂರಿನ ಸಿ.ಎಚ್. ವಿಜಯ ಶಂಕರ್ ಹಾಗೂ ರಾಜಸ್ಥಾನ, ನಾಗಲ್ಯಾಂಡ್, ಗೋವಾ ರಾಜ್ಯಗಳ ರಾಜ್ಯಪಾಲರೊಂದಿಗೆ ಸಂಸತ್ತಿನ ಗೃಹ ಸಚಿವರ ಕಚೇರಿಯಲ್ಲಿ ಪ್ರತ್ಯೇಕವಾಗಿ ಅಮಿತ್ ಶಾ ಸಭೆ ನಡೆಸಿದ್ದಾರೆ.

ನವದೆಹಲಿ: ಮೇಘಾಲಯದ ನೂತನ ರಾಜ್ಯಪಾಲರಾಗಿ ನಿನ್ನೆ ಅಧಿಕಾರ ಸ್ವೀಕರಿಸಿದ ಮೈಸೂರಿನ ಸಿ.ಎಚ್. ವಿಜಯಶಂಕರ್ ಸೇರಿದಂತೆ ನಾಲ್ವರು ರಾಜ್ಯಗಳ ರಾಜ್ಯಪಾಲರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಿ.ಎಚ್. ವಿಜಯ ಶಂಕರ್ ಹಾಗೂ ರಾಜಸ್ಥಾನ, ನಾಗಲ್ಯಾಂಡ್, ಗೋವಾ ರಾಜ್ಯಗಳ ರಾಜ್ಯಪಾಲರೊಂದಿಗೆ ಸಂಸತ್ತಿನ ಗೃಹ ಸಚಿವರ ಕಚೇರಿಯಲ್ಲಿ ಪ್ರತ್ಯೇಕವಾಗಿ ಅಮಿತ್ ಶಾ ಸಭೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಮಿತ್ ಶಾ ಕಚೇರಿ ಮಾಹಿತಿ ಹಂಚಿಕೊಂಡಿದೆ. ರಾಜಸ್ಥಾನದ ರಾಜ್ಯಪಾಲ ಹರಿಭಾವು ಬಾಗ್ಡೆ, ನಾಗಾಲ್ಯಾಂಡ್ ರಾಜ್ಯಪಾಲ ಲಾ.ಗಣೇಶನ್, ಮೇಘಾಲಯ ರಾಜ್ಯಪಾಲ ಸಿ.ಹೆಚ್. ವಿಜಯಸಂಕರ್ ಹಾಗೂ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಗೃಹ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ಅಮಿತ್ ಶಾ ಕಚೇರಿ ಟ್ವೀಟ್ ಮಾಡಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT