ಕಂಗನಾ ರಣಾವತ್ 
ದೇಶ

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ಹೇಳಿಕೆ

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ನವದೆಹಲಿ: 'ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ' ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು' ಎಂದು ಕಿಡಿಕಾರಿದ್ದಾರೆ.

ಮುಂದುವರಿದು, 'ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ' ಎಂದಿದ್ದಾರೆ.

'ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT