ಜೈಪುರ ಮಳೆ 
ದೇಶ

ದೆಹಲಿ ಆಯ್ತು, ಈಗ ಜೈಪುರದಲ್ಲಿ ನೆಲಮಾಳಿಗೆಗೆ ನೀರು ನುಗ್ಗಿ ಮೂವರ ಸಾವು!

ಗುರುವಾರ ಮುಂಜಾನೆ ನಗರದ ವಿಶ್ವಕರ್ಮ ಪ್ರದೇಶದಲ್ಲಿ ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ಪರಿಣಾಮ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಜೈಪುರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋಚಿಂಗ್ ಸೆಂಟರ್ ಒಂದರ ನೆಲ ಮಾಳಿಗೆಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದರು. ಇದೀಗ ಜೈಪುರದಲ್ಲಿ ಇಂತಹುದೇ ಘಟನೆ ನಡೆದಿದೆ.

ಗುರುವಾರ ಮುಂಜಾನೆ ನಗರದ ವಿಶ್ವಕರ್ಮ ಪ್ರದೇಶದಲ್ಲಿ ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ಪರಿಣಾಮ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ನಂತರ ಕುಟುಂಬ ಸದಸ್ಯರು ತಮ್ಮ ವಸ್ತುಗಳನ್ನು ತೆಗೆಯಲು ಪ್ರಾರಂಭಿಸಿದ್ದಾರೆ. ಆ ಸಂದರ್ಭದಲ್ಲಿ ನೆಲಮಾಳಿಗೆಯಲ್ಲಿ ನೀರು ತುಂಬಿದ್ದರಿಂದ ಎರಡು ಕುಟುಂಬಗಳ ಮೂವರು ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೂರ್ವ ವಲಯದ ಡಿಸಿಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.

ಎನ್ ಡಿಆರ್ ಎಫ್ ತಂಡ ಮೂವರ ಮೃತದೇಹಗಳನ್ನು ಹೊರಗೆ ತೆಗೆದ ನಂತರ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಗಿದೆ. ಮೂವರ ಪೈಕಿ ಒಬ್ಬರು ಬೇರೊಂದು ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮನೆಯ ನೆಲಮಾಳಿಗೆಯ ಮಾರ್ಗವು ಕಿರಿದಾದ ಮತ್ತು ಆಳವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಇದೇ ರೀತಿಯ ಮನೆಗಳ ನಿವಾಸಿಗಳು ಮಳೆಗಾಲದ ಸಮಯದಲ್ಲಿ ತಮ್ಮ ನೆಲಮಾಳಿಗೆಯಲ್ಲಿ ಇರದಂತೆ ಸೂಚಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕನ್ವಟಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನ್ಯಾಯ ಸಿಗುತ್ತೆ ಅನ್ನೋ ನಂಬಿಕೇನೆ ಇಲ್ಲ.. ಸತ್ಯಾಗ್ರಹ ಕೂರ್ತೀನಿ': ನ್ಯಾಯಮೂರ್ತಿಗಳ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ರಣಕಹಳೆ! Video

ಕುಸಿದ ಜಾಗತಿಕ ವ್ಯವಸ್ಥೆಯನ್ನು ಉಳಿಸಬಲ್ಲದೇ ಗ್ಲೋಬಲ್ ಸೌತ್? (ಜಾಗತಿಕ ಜಗಲಿ)

ರಾಜನಾಥ್ ಸಿಂಗ್ ದೇಶದ ಮುಂದಿನ ರಾಷ್ಟ್ರಪತಿ? ಜೂನ್ ನಲ್ಲಿ ನೇಮಕ ಸಾಧ್ಯತೆ

ಲೆಕ್ಕ ಕೊಡ್ತೀವಿ.. ಕೂಡಲೇ ಮಠ ಖಾಲಿ ಮಾಡಿ: ವಚನಾನಂದ ಶ್ರೀಗಳಿಗೆ ಟ್ರಸ್ಟ್ ತಾಕೀತು

IPL 2026: LSG vs KKR ಸ್ಫೋಟಕ ಆಟ.. ಇತಿಹಾಸ ಬರೆದ Rinku Singh, 15 ವರ್ಷಗಳ ಹಳೆಯ MS Dhoni ದಾಖಲೆ ಧೂಳಿಪಟ

SCROLL FOR NEXT