ನೂತನ ಸಂಸತ್ ಕಟ್ಟಡದಲ್ಲಿ ನೀರು ಸೋರಿಕೆಯಾಗುತ್ತಿರುವುದು. 
ದೇಶ

ನೂತನ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ: ಹಳೆಯ ಸಂಸತ್ತಿಗೆ ಹೋಲಿಕೆ ಮಾಡಿ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಇದರ ಬೆನ್ನಲ್ಲೇ ಹಳೆಯ ಸಂಸತ್ ಭವನಕ್ಕೆ ಹೋಲಿಕೆ ಮಾಡಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿವೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರಲು ಆರಂಭಿಸಿದೆ.

ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಇದರ ಬೆನ್ನಲ್ಲೇ ಹಳೆಯ ಸಂಸತ್ ಭವನಕ್ಕೆ ಹೋಲಿಕೆ ಮಾಡಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿವೆ.

ಲೋಕಸಭೆಯ ಲಾಬಿಯಲ್ಲಿ ನೀರು ಸೋರಿಕೆ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. ಅಲ್ಲದೆ, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಣಿಕ್ಕಂ ಟ್ಯಾಗೋರ್, ಸಂಸತ್ತಿನ ಹೊರಗೆ ಪೇಪರ್‌ ಲೀಕ್‌, ಒಳಗೆ ವಾಟರ್‌ ಲೀಕ್‌ ಎಂದು ಟೀಕಿಸಿದ್ದಾರೆ.

ಸಂಸತ್‌ ಭವನದಲ್ಲಿ ಇತ್ತೀಚೆಗೆ ಆಗುತ್ತಿರುವ ವಾಟರ್‌ ಲೀಕೇಜ್‌, ಹೊಸ ಬಿಲ್ಡಿಂಗ್‌ ಇನ್ನೂ ಹೊಸ ವಾತಾವರಣಕ್ಕೆ ಹೊಂದಿಕೊಂಡಿಲ್ಲ ಎನ್ನುವುದನ್ನು ತೋರಿಸಿದೆ. ಸಂಸತ್‌ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ ಎಂದು ಬರೆದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಕನೌಜ್ ಸಂಸದ ಅಖಿಲೇಶ್ ಯಾದವ್ ಅವರು ಮುಂಗಾರು ಅಧಿವೇಶನದ ಉಳಿದ ಭಾಗವನ್ನು ಹಳೆಯ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT