UPSC ಕೋಚಿಂಗ್ ಸೆಂಟರ್ 
ದೇಶ

IAS ಕೋಚಿಂಗ್ ಸೆಂಟರ್​​ನಲ್ಲಿ ಆಕಾಂಕ್ಷಿಗಳ ಸಾವು ಪ್ರಕರಣ; ಸಿಬಿಐ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ

ಜುಲೈ 27 ರಂದು ಓಲ್ಡ್ ರಾಜೀಂದರ್ ನಗರದಲ್ಲಿರುವ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವಿಗೀಡಾಗಿದ್ದರು.

ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್ ವೊಂದರ ನೆಲಮಾಳಿಗೆಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮಯಕ್ಕೆ ಸರಿಯಾಗಿ ತನಿಖೆ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಯನ್ನು ನೇಮಿಸುವಂತೆ ಕೇಂದ್ರ ಜಾಗೃತ ಆಯುಕ್ತರಿಗೆ ನಿರ್ದೇಶಿಸಿದೆ.

ಘಟನೆಯ ಸ್ವರೂಪಕ್ಕೆ ಸಂಬಂಧಿಸಿದಂತೆ ಮತ್ತು ತನಿಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಸಂದೇಹವಿಲ್ಲ ಎಂದು ಖಚಿತಪಡಿಸಿಕೊಳ್ಳಲು, ಈ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತದೆ ನ್ಯಾಯಾಲಯ ಹೇಳಿದೆ.

ಇದೇ ವೇಳೆ ದುರ್ಘಟನೆ ಸಂಬಂಧ ನ್ಯಾಯಾಲಯವು ಪೊಲೀಸರು ಹಾಗು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD)ನ್ನು ತರಾಟೆಗೆ ತೆಗೆದುಕೊಂಡಿತು.

ದೆಹಲಿಯಲ್ಲಿನ ಚರಂಡಿಯಂತಹ ಭೌತಿಕ ಮೂಲಸೌಕರ್ಯಗಳು ಸಮರ್ಪಕವಾಗಿಲ್ಲ. ಕಳಪೆಯಾಗಿ ನಿರ್ವಹಣೆ ಮಾಡುತ್ತಿವೆ. ಇತ್ತೀಚಿನ ದುರಂತಗಳು ನಾಗರಿಕ ಸಂಸ್ಥೆಗಳಿಗೆ ನೀಡಿದ ಆದೇಶಗಳನ್ನು ಪಾಲಿಸುತ್ತಿಲ್ಲ, ಮಳೆನೀರು ಚರಂಡಿಗಳ ಬಗ್ಗೆ ಎಂಸಿಡಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸದ ಮಳೆನೀರು ಚರಂಡಿಗಳ ಬಗ್ಗೆ ಎಂಸಿಡಿ ಅಧಿಕಾರಿಗಳು ಆಯುಕ್ತರಿಗೆ ಏಕೆ ಮಾಹಿತಿ ನೀಡಲಿಲ್ಲ ಎಂದು ಇದೇ ಪ್ರಶ್ನಿಸಿದೆ.

ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ನುಗ್ಗಿದ ಎಸ್‌ಯುವಿ ಚಾಲಕನನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಉಲ್ಲೇಖಿಸಿದ ನ್ಯಾಯಾಲಯ, ನೀವು ಎಸ್‌ಯುವಿ ಚಾಲಕನನ್ನು ಅಲ್ಲಿ ಬಂಧಿಸಿದ ರೀತಿಯಲ್ಲಿ ನೆಲಮಾಳಿಗೆಯಲ್ಲಿ ಮಳೆನೀರು ಪ್ರವೇಶಿಸಲು ನೀವು ತಡೆದಿಲ್ಲ ಎಂದು ಕಿಡಿಕಾರಿತು.

ಜುಲೈ 27 ರಂದು ಓಲ್ಡ್ ರಾಜೀಂದರ್ ನಗರದಲ್ಲಿರುವ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯೊಳಗೆ ಮಳೆ ನೀರು ನುಗ್ಗಿದ್ದರಿಂದ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳಾದ ಶ್ರೇಯಾ ಯಾದವ್, ತಾನ್ಯಾ ಸೋನಿ ಮತ್ತು ನೆವಿನ್ ಡಾಲ್ವಿನ್ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ