ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಕಾರು ಡಿಕ್ಕಿ ಹೊಡೆದು ಪ್ರೊಫೆಸರ್ ಸಾವು, ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ

ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅಪಘಾತದ ಸಮಯದಲ್ಲಿ ಕಾರು ಚಾಲಕ ಶುಭಂ ಪ್ರತಾಪ್ ಪಾಟೀಲ್ ಪಾನಮತ್ತನಾಗಿದ್ದ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಇನ್ಸ್‌ಪೆಕ್ಟರ್ ವಿಜಯ್ ಪಾಟೀಲ್ ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT