ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಶಾಲೆಗೆ ಬಾಂಬ್ ಬೆದರಿಕೆ ಸಂದೇಶ; 14 ವರ್ಷದ ಬಾಲಕನ ಬಂಧನ

ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ

ನವದೆಹಲಿ: ತರಗತಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ತನ್ನ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ 12.30ರ ಸುಮಾರಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದರಿಂದ ಖಾಸಗಿ ಶಾಲೆಯಲ್ಲಿ ಆತಂಕ ಮನೆ ಮಾಡಿತ್ತು.

ಕೂಡಲೇ ಪೊಲೀಸರನ್ನು ಕರೆಸಿ ಬಾಂಬ್ ಮತ್ತು ಶ್ವಾನ ದಳದಿಂದ ಕೂಲಂಕಷ ತಪಾಸಣೆ ನಡೆಸಲಾಯಿತು. ದಕ್ಷಿಣ ದೆಹಲಿಯ ಇನ್ನೂ ಎರಡು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಸಂದೇಶ ಕಳುಹಿಸಲಾಗಿತ್ತು.

ಸಂದೇಶ ಕಳುಹಿಸಿದವರು ಪಾಕಿಸ್ತಾನಿ ಜನರಲ್ ಎಂದು ಕೂಡ ಹೇಳಲಾಗಿತ್ತು. ಬಾಲಕನನ್ನು ಶನಿವಾರ ಬಂಧಿಸಲಾಗಿದೆ. ಆತ ಸಂಬಂಧಿಕರ ಇಮೇಲ್ ಖಾತೆಯ ಮೂಲಕ ಶಾಲಾ ಆಡಳಿತಕ್ಕೆ ಮೇಲ್ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ಎರಡು ಶಾಲೆಗಳಲ್ಲಿಯೂ ತಪಾಸಣೆ ನಡೆಸಲಾಯಿತು. ಆದರೆ ಮೂರರಲ್ಲಿ ಎಲ್ಲಿಯೂ ಅನುಮಾನಾಸ್ಪದ ವಸ್ತುಗಳು ಕಂಡುಬರಲಿಲ್ಲ. ವಿಚಾರಣೆಯ ಸಮಯದಲ್ಲಿ, ಮರುದಿನ ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಕಾಬೂಲ್ ನಲ್ಲಿ ವೈಮಾನಿಕ ದಾಳಿ: ಪಾಕ್ ಸೇನೆಯಿಂದ ಹತ್ಯೆ, ರಶೀದ್ ಖಾನ್ ಸೇರಿದಂತೆ ಅಪ್ಘನ್ ಕ್ರಿಕೆಟಿಗರ ಆಕ್ರೋಶ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

ಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?

SCROLL FOR NEXT