ಆಧಾರ್ ಕಾರ್ಡ್  online desk
ದೇಶ

25 ಸಾವಿರಕ್ಕೆ ಬೆರಳಚ್ಚು, ಶಾಲಾ ಮಕ್ಕಳ ರೆಟಿನಾ ಸ್ಕ್ಯಾನ್ ಮೂಲಕ ನಕಲಿ ಆಧಾರ್ ಕಾರ್ಡ್: FIR ದಾಖಲಿಸಿದ CBI

ಸಂಚೋರ್‌ನಲ್ಲಿರುವ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ಪ್ರೋಗ್ರಾಮರ್ ಮನೋಹರ್ ಲಾಲ್ ಅವರು ಪೊಲೀಸರಿಗೆ ದೂರು ನೀಡಿದ ನಂತರ ಸುದ್ದಿ ವರದಿಯ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ನಕಲಿ ದಾಖಲೆಗಳನ್ನು ಸೃಷ್ಟಿ ಮಾಡುವುದಕ್ಕೆ ಆಧಾರ್ ಕಾರ್ಡ್ ಗಳನ್ನು ಮಾಡಿಕೊಡುತ್ತಿದ್ದ ಜಾಲ ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ಸಿಬಿಐ ಎಫ್ಐಆರ್ ದಾಖಲಿಸಿದೆ. 25,000 ರೂಗಳಿಗೆ ನಕಲಿ ದಾಖಲೆ, ಬೆರಳಚ್ಚು, ರೆಟಿನಾ ಸ್ಕ್ಯಾನ್ ಮೂಲಕ ಆಧಾರ್ ಕಾರ್ಡ್ ಮಾಡಿಕೊಡುವ ಜಾಲ ಇದಾಗಿದೆ.

ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪ್ರಕರಣಗಳಲ್ಲಿ ಶಾಲಾ ಮಕ್ಕಳ ರೆಟಿನಾ ಸ್ಕ್ಯಾನ್ ಮಾಡಿ, ಬೆರಳಚ್ಚು ಪಡೆದುಕೊಂಡು ಆಧಾರ್ ಕಾರ್ಡ್ ಮಾಡಿಕೊಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಚೋರ್‌ನಲ್ಲಿರುವ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ಪ್ರೋಗ್ರಾಮರ್ ಮನೋಹರ್ ಲಾಲ್ ಅವರು ಪೊಲೀಸರಿಗೆ ದೂರು ನೀಡಿದ ನಂತರ ಸುದ್ದಿ ವರದಿಯ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ನಕಲಿ ಆಧಾರ್ ಕಾರ್ಡ್‌ಗಳ ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದರು.

ಸಂಚೋರ್ ಭಾರತ-ಪಾಕಿಸ್ತಾನ ಗಡಿಯಿಂದ 150 ಕಿಮೀ ದೂರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸುದ್ದಿ ವರದಿಯಾದ ಮೂರು ದಿನಗಳಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಬಗ್ಗೆ ಸಿಬಿಐ ತನಿಖೆಗೆ ಕೋರಿದೆ.

ರಾಜಸ್ಥಾನ ಸರ್ಕಾರವು ಜುಲೈ 9 ರಂದು ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ವರ್ಗಾಯಿಸಿತು, ಅದನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜುಲೈ 30 ರಂದು ಸಿಬಿಐಗೆ ರವಾನಿಸಿದೆ ಎಂದು ಅವರು ಹೇಳಿದರು.

ನಂತರ, ಸಿಬಿಐ ಗಣಪತ್ ಸಿಂಗ್, ತೊಗರಾಮ್ ಮತ್ತು ಕನೆಹಯ್ಯ ಲಾಲ್ ಎಂಬ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ದೂರುದಾರರ ಪ್ರಕಾರ, ಮೂವರು ಪುರುಷರು ತಮ್ಮ ಇ-ಮಿತ್ರ ಐಡಿಗಳು ಮತ್ತು ಆಧಾರ್ ಐಡಿಗಳಿಂದ ಆಧಾರ್ ಕಾರ್ಡ್‌ಗಳನ್ನು ರಚಿಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT