ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ 
ದೇಶ

Khammam Bike Accident: ವೇಗವಾಗಿ ಬಂದು ನಿಂತಿದ್ದ ಲಾರಿ ಢಿಕ್ಕಿ; ಸ್ಕೂಟಿಯಲ್ಲಿದ್ದ ಮೂವರ ಸಾವು! Video

ಮೂವರು ಯುವಕರ ತಂಡ ದ್ವಿಚಕ್ರವಾಹನದಲ್ಲಿ ವೇಗವಾಗಿ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ನಲ್ಲಿದ್ದ ಸವಾರರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನ ತಲೆಯ ಮೆದುಳು ಹೊರಗೆ ಬಂದಿದೆ.

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭೀಕರ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದು ನಿಂತಿದ್ದ ಲಾರಿಗೆ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ವಿಡಿಯೋ ವೈರಲ್ ಆಗುತ್ತಿದೆ.

ಆಂಧ್ರ ಪ್ರದೇಶದ ಖಮ್ಮಂ ಜಿಲ್ಲೆಯ ಸತ್ತುಪಲ್ಲಿ ಮಂಡಲದಲ್ಲಿ ಈ ದುರ್ಘಟನೆ ನಡೆದಿದ್ದು, ಮೂವರು ಯುವಕರ ತಂಡ ದ್ವಿಚಕ್ರವಾಹನದಲ್ಲಿ ವೇಗವಾಗಿ ಬಂದಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ನಲ್ಲಿದ್ದ ಸವಾರರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನ ತಲೆಯ ಮೆದುಳು ಹೊರಗೆ ಬಂದಿದೆ.

ಈ ಅಪಘಾತದ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಘಟನೆ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ಬೇತಿ ಸುರೇಶ್ (22), ಮುದ್ದಿನ ವೇಣು (19) ಮತ್ತು ಕರಿಮುಲ್ಲಾ (11) ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಂತೆಯೇ ಈ ಅಪಘಾತ ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವ ಪೋಷಕರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪೋಷಕರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ