ಉದ್ಧವ್ ಠಾಕ್ರೆ online desk
ದೇಶ

ಅಧಿಕಾರ ಜಿಹಾದ್ ನಲ್ಲಿ ತೊಡಗಿರುವ ಬಿಜೆಪಿ: ಅಮಿತ್ ಶಾ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳನ್ನು ಒಡೆಯುವ ಮೂಲಕ ಬಿಜೆಪಿ ಅಧಿಕಾರ ಜಿಹಾದ್ ನಲ್ಲಿ ತೊಡಗಿದೆ ಎಂದು ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಪುಣೆ: ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತನ್ನ ಮಾಜಿ ಮಿತ್ರ ಪಕ್ಷ ಅಧಿಕಾರ ಜಿಹಾದ್ ನಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳನ್ನು ಒಡೆಯುವ ಮೂಲಕ ಬಿಜೆಪಿ ಅಧಿಕಾರ ಜಿಹಾದ್ ನಲ್ಲಿ ತೊಡಗಿದೆ ಎಂದು ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಇದಕ್ಕೂ ಮೊದಲು ಮಹಾರಾಷ್ಟ್ರದಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕ್ರೆ ಔರಂಗಜೇಬ್ ಅಭಿಮಾನಿಗಳ ಕ್ಲಬ್ ಸೇರಿದ್ದಾರೆಂದು ಕುಟುಕಿದ್ದರು. ಅಮಿತ್ ಶಾ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಉದ್ಧವ್ ಠಾಕ್ರೆ, ಅಮಿತ್ ಶಾ ಅವರನ್ನು ಮರಾಠರನ್ನು 3 ನೇ ಪಾಣಿಪತ್ ಯುದ್ಧದಲ್ಲಿ ಸೋಲಿಸಿದ್ದ ಅಫ್ಘಾನ್ ರಾಜ ಅಹ್ಮದ್ ಶಾ ಅಬ್ದಾಲಿ ಅವರ ರಾಜಕೀಯ ಸಂತತಿ ಎಂದು ಹೇಳುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಪುಣೆಯಲ್ಲಿ ನಡೆದ ಶಿವಸಂಕಲ್ಪ್ ರ್ಯಾಲಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಏಕನಾಥ್ ಶಿಂಧೆ ನೇತೃತ್ವದ ಆಡಳಿತ ಮುಖ್ಯಮಂತ್ರಿ ಲಡ್ಕಿ ಬಹಿನ್ ಯೋಜನೆಯಂತಹ ಯೋಜನೆಗಳ ರೂಪದಲ್ಲಿ ಮತದಾರರಿಗೆ "ಉಚಿತ" (ಉಚಿತ) ನೀಡುವ ಮೂಲಕ ಲಂಚ ನೀಡುತ್ತಿದೆ ಎಂದು ಆರೋಪಿಸಿದರು. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು 1,500 ರೂ. ನೀಡಲಾಗುತ್ತದೆ.

ಹಿಂದಿನ ಮಿತ್ರ ಪಕ್ಷದ ವಿರುದ್ಧ ಪಕ್ಷಗಳನ್ನು ಒಡೆಯುತ್ತಿರುವ ಆರೋಪ ಮಾಡಿದ ಅವರು, "ನಾವು ನಮ್ಮ ಹಿಂದುತ್ವವನ್ನು ವಿವರಿಸಿದ ನಂತರ ಮುಸ್ಲಿಮರು ನಮ್ಮೊಂದಿಗಿದ್ದು ನಾವು (ಬಿಜೆಪಿ ಪ್ರಕಾರ) ಔರಂಗಜೇಬ್ ಅಭಿಮಾನಿಗಳ ಸಂಘದವರಾದರೆ ನೀವು ಮಾಡುತ್ತಿರುವುದು ಪವರ್ ಜಿಹಾದ್" ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕಳೆದ ತಿಂಗಳು ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಶಾ ಅವರು ಠಾಕ್ರೆ ಮೇಲೆ ವಾಗ್ದಾಳಿ ನಡೆಸಿ, ಅವರನ್ನು 1993 ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಕ್ಷಮೆ ಕೋರಿದ ಜನರೊಂದಿಗೆ ಕುಳಿತಿದ್ದ "ಔರಂಗಜೇಬ್ ಅಭಿಮಾನಿಗಳ ಸಂಘದ ಮುಖ್ಯಸ್ಥ" ಎಂದು ಜರಿದಿದ್ದರು

ಅವರ ಹೇಳಿಕೆಯನ್ನು ಉಲ್ಲೇಖಿಸಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಪರೋಕ್ಷವಾಗಿ ಸವಾಲು ಹಾಕಿರುವ ಉದ್ಧವ್ ಠಾಕ್ರೆ ರಾಜಕೀಯದಲ್ಲಿ ಒಂದೋ "ನೀವು ಇರುತ್ತೀರಿ ಅಥವಾ ನಾನು ಇರುತ್ತೇನೆ ಎಂದು ಹೇಳಿದ್ದರು. ಈ ವೇಳೆ ಯಾವುದೇ ವ್ಯಕ್ತಿಯನ್ನು ಉಲ್ಲೇಖಿಸುತ್ತಿಲ್ಲ ಎಂದೂ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

SCROLL FOR NEXT