ಅಮರನಾಥ ಯಾತ್ರೆ 
ದೇಶ

ಅಮರನಾಥ ಯಾತ್ರೆಗೆ ಮತ್ತೊಂದು ಯಾತ್ರಾರ್ಥಿಗಳ ತಂಡ ಪ್ರಯಾಣ!

ಕರ್ನಾಟಕದ ಯಾತ್ರಾರ್ಥಿಯೊಬ್ಬರು, "ಬಾಬಾನಿಗೆ ಪ್ರಾರ್ಥನೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಬೈಕ್‌ನಲ್ಲಿ ಪಹಲ್ಗಾಮ್‌ಗೆ ಪ್ರಯಾಣಿಸುತ್ತಿದ್ದೇನೆ. ವ್ಯವಸ್ಥೆಗಳು ನಿಜವಾಗಿಯೂ ಚೆನ್ನಾಗಿವೆ'

ಶ್ರೀನಗರ: ಅಮರನಾಥ ಯಾತ್ರೆಗೆ ಶ್ರೀನಗರದ ಬೇಸ್ ಕ್ಯಾಂಪ್ ನಿಂದ ಪಹಲ್ಗಾಮ್ ಕಡೆಗೆ ಮತ್ತೊಂದು ಯಾತ್ರಾರ್ಥಿಗಳ ತಂಡ ಭಾನುವಾರ ಬೆಳಿಗ್ಗೆ ಹೊರಟಿತು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಅಡೆತಡೆ ಎದುರಿಸುತ್ತಿದ್ದರೂ, ಯಾತ್ರಿಕರು ವ್ಯವಸ್ಥೆಗಳ ಬಗ್ಗೆ ಸಕಾರಾತ್ಕವಾಗಿ ಪ್ರತಿಕ್ರಿಯಿಸಿದರು. ಅಲ್ಲದೇ ತಮ್ಮ ಪ್ರಯಾಣವನ್ನು ಪೂರ್ಣಗೊಳಿಸಲು ಉತ್ತಮ ಹವಾಮಾನವನ್ನು ಆಶಿಸಿದರು.

ಕರ್ನಾಟಕದ ಯಾತ್ರಾರ್ಥಿಯೊಬ್ಬರು, "ಬಾಬಾನಿಗೆ ಪ್ರಾರ್ಥನೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಬೈಕ್‌ನಲ್ಲಿ ಪಹಲ್ಗಾಮ್‌ಗೆ ಪ್ರಯಾಣಿಸುತ್ತಿದ್ದೇನೆ. ವ್ಯವಸ್ಥೆಗಳು ನಿಜವಾಗಿಯೂ ಚೆನ್ನಾಗಿವೆ ಎಂದು ಹೇಳಿದರು.

ಶಿಲ್ಲಾಂಗ್‌ನ ಯಾತ್ರಿಕರಾದ ಸರದ್ ಪ್ರಧಾನ್, ಹೆಂಡತಿಯೊಂದಿಗೆ ಮೊದಲ ಬಾರಿಗೆ ಬಂದಿದ್ದೇನೆ. ವ್ಯವಸ್ಥೆಗಳು ತುಂಬಾ ಚೆನ್ನಾಗಿವೆ, ಮತ್ತು ಹವಾಮಾನ ಪರಿಸ್ಥಿತಿ ಸುಧಾರಿಸಿದರೆ ಪ್ರಯಾಣವನ್ನು ಪೂರ್ಣಗೊಳಿಸಬಹುದು ಎಂದರು.

ಈ ಮಧ್ಯೆ ಹವಾಮಾನ ವೈಪರೀತ್ಯದಿಂದಾಗಿ ಭಾನುವಾರ ಬಾಲ್ಟಾಲ್ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೊನ್ನೆ ಶನಿವಾರ ಮತ್ತೊಂದು ಬ್ಯಾಚ್ ಕೂಡ ಅಮರನಾಥ ಯಾತ್ರೆಗೆ ತೆರಳಿತ್ತು. ಜೂನ್ 29 ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಬೇಸ್ ಕ್ಯಾಂಪ್‌ನಿಂದ ಅಧಿಕೃತವಾಗಿ ಪ್ರಾರಂಭವಾದ ಯಾತ್ರೆಯು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ.

ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಗಮನಾರ್ಹ ಹೆಚ್ಚಳದ ನಡುವೆ ಅಮರನಾಥ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT